ದಿವಂಗತ ಮೇಟಿ ಮುದಿಯಪ್ಪ ನೆನಪಿನ ಯುವ ಕಥಾ ಸ್ಪರ್ಧೆ – 2024

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ,ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ಉಡುಪಿ ಜಿಲ್ಲೆಯ ಯುವ ಸಾಹಿತಿಗಳಿಗಾಗಿ ಸಾಹಿತಿ, ಕವಿ ದಿವಂಗತ ಮೇಟಿ ಮುದಿಯಪ್ಪ ನೆನಪಿನ ಜಿಲ್ಲಾಮಟ್ಟದ ‘ಯುವ ಕಥಾ ಸ್ಪರ್ಧೆ’-2024 ಆಯೋಜಿಸಲಾಗಿದೆ.

18 ರಿಂದ 35 ವಯೋಮಿತಿಯ ಉಡುಪಿ ಜಿಲ್ಲೆಯ ಯುವಕ ಯುವತಿಯರು ಯಾರೂ ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು.
ಕಥೆ ಕಳುಹಿಸಲು ಕೊನೆಯ ದಿನಾಂಕ ಮಾರ್ಚ್ 30, 2024. ಸ್ಪರ್ಧೆಯ ಪ್ರಥಮ ಮತ್ತು ದ್ವಿತೀಯ ಸ್ಥಾನಿಗಳಿಗೆ ನಗದು ಬಹುಮಾನ ತಲಾ ರೂ. 5000 ಹಾಗೂ 3000 ದ ಜೊತೆಗೆ ಪ್ರಶಸ್ತಿ ಪತ್ರ ಹಾಗೂ ಪುಸ್ತಕ ಬಹುಮಾನ ನೀಡಲಾಗುವುದು.
ಕಥೆಯು ಸ್ವರಚಿತವಾಗಿದ್ದು ಡಿಟಿಪಿ ಮಾಡಿದ ಎರಡು ಪ್ರತಿಗಳನ್ನು ಜನಾರ್ದನ ಕೊಡವೂರು, ಗೌರವ ಕಾರ್ಯದರ್ಶಿಗಳು,
ಭಾಮಾ, ಉಡುಪ ಲೇನ್, ಕೆನರಾ ಬ್ಯಾಂಕ್ ಹತ್ತಿರ, ಕೊಡವೂರು, ಅಂಚೆ ,ಕ್ರೋಡಾಶ್ರಮ 576106, ಉಡುಪಿ ಜಿಲ್ಲೆ
ಈ ವಿಳಾಸಕ್ಕೆ ಕಳುಹಿಸಿ ಕೊಡಬೇಕು.

ಹೆಚ್ಚಿನ ಮಾಹಿತಿಗಾಗಿ: 98452 40309, ರವಿರಾಜ್ ಎಚ್.ಪಿ, ಅಧ್ಯಕ್ಷರು, ಕಸಾಪ ಉಡುಪಿ ತಾಲೂಕು ಘಟಕ
ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿರುತ್ತದೆ.

 
 
 
 
 
 
 
 
 
 
 

Leave a Reply