ಮೇವಿ ಮಿರಾಂದಗೆ ಪಿಹೆಚ್.ಡಿ. ಗರಿ

ಉಡುಪಿ : ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ಮೇವಿ ಮಿರಾಂದ ಅವರು ತಮಿಳುನಾಡಿನ ಭಾರತಿಯಾರ್ ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿರುವ “ಸ್ಟೇಸ್  ಮ್ಯಾನೇಜ್ಮೆಂಟ್ ಎಮಂಗ್ ವುಮೆನ್ ಎಂಪ್ಲಾಯೀಸ್ ಆಫ್ ಪಬ್ಲಿಕ್ ಸೆಕ್ಟರ್ ಇನ್ಶೂರೆನ್ಸ್ ಕಂಪನೀಸ್ : ಎ ಸ್ಟಡೀ ವಿಥ್ ರೆಫರೆನ್ಸ್ ಟು ಕೋಸ್ಟಲ್ ಕರ್ನಾಟಕ” ಎಂಬ ಮಹಾಪ್ರಬಂಧಕ್ಕೆ ಪಿಹೆಚ್.ಡಿ ಪದವಿ ಪಡೆದಿದ್ದಾರೆ. 

ಅವರು ಡಾ. ಜಿ. ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ  ಪ್ರಾಧ್ಯಾಪಕ ಡಾ. ಉಮೇಶ್ ಮಯ್ಯ ಅವರ ಮಾರ್ಗದರ್ಶನದಲ್ಲಿ ಪ್ರಬಂಧವನ್ನು ಸಿದ್ಧಪಡಿಸಿದ್ದರು.  ಮಂಗಳೂರು ವಿಶ್ವವಿದ್ಯಾನಿಲಯದಿಂದ ಎಂ.ಕಾ೦. ಪದವಿ ಹಾಗೂ ಅಣ್ಣಾಮಲೈ ವಿಶ್ವವಿದ್ಯಾನಿಲಯದಿಂದ ಎಂ.ಫಿಲ್ ಪದವಿಯನ್ನು ಪಡೆದಿರುತ್ತಾರೆ. 

 ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಭಟ್ಕಳದಲ್ಲಿ  ಉಪನ್ಯಾಸಕ ಸೇವೆಯನ್ನು ಪ್ರಾರಂಭಿಸಿ ಪ್ರಸ್ತುತ ತೆಂಕನಿಡಿಯೂರು ಕಾಲೇಜಿನ ವಾಣಿಜ್ಯಶಾಸ್ತ್ರ  ಸ್ನಾತಕೋತ್ತರ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.  ಇವರು ರಾಷ್ಟ್ರ  ಮಟ್ಟದ ಹಾಗೂ ರಾಜ್ಯ ಮಟ್ಟದ ವಿಚಾರ ಸಂಕಿರಣಗಳಲ್ಲಿ ಪ್ರಬಂಧ ಮಂಡಿಸಿರುತ್ತಾರೆ.  

 
 
 
 
 
 
 
 
 
 
 

Leave a Reply