ಉಡುಪಿ: ನಗರದ ಜಿಲ್ಲಾಸ್ಪತ್ರೆ ಆವರಣದಲಿ ಎಂ.ಟಿ.ಆರ್ ಸಂಸ್ಥೆಯು ಸಿಎಸ್ಆರ್ ಚಟುವಟಿಕೆಯಡಿ 50 ಲಕ್ಷ ರೂಗಳ ವೆಚ್ಚದ ಹವಾನಿಯಂತ್ರಿತ ವೆಂಟಿಲೇಟರ್ ಸೌಲಭ್ಯವನ್ನು ಒಳಗೊಂಡ ಆ್ಯಂಬುಲೆನ್ಸ್ ಹಾಗೂ 10 ಐಸಿಯು ಬೆಡ್ ಗಳನ್ನು ಸಾರ್ವಜನಿಕ ಸೇವೆಗೆ ನೀಡಿದರು. ಜಿಲ್ಲಾಡಳಿತ ಪರವಾಗಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಸ್ವೀಕರಿಸಿದರು
ಈ ಸಂದರ್ಭದಲ್ಲಿ ಜಿ.ಪಂ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ, ಡಿ,ಹೆಚ್.ಓ ಡಾ. ನಾಗಭೂಷಣ್ ಉಡುಪ, ಜಿಲ್ಲಾ ಸರ್ಜನ್ ಡಾ. ಮಧುಸೂಧನ್ ನಾಯಕ್, ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಪ್ರಶಾಂತ್ ಭಟ್ ಎಂ.ಟಿ.ಆರ್ ಸಂಸ್ಥೆಯ ಜನರಲ್ ಬ್ಯುಸಿನೆಸ್ ಮ್ಯಾನೇಜರ್ ಮೂರ್ತಿ ಆರ್, ಎಂ.ಟಿ.ಆರ್ ಸಂಸ್ಥೆಯ ಮುಖ್ಯಾಧಿಕಾರಿ ಪ್ರಕಾಶ್ ದೇಬಶೆಟ್ಟಿ, ಸಂಸ್ಥೆಯ ಏರಿಯಾ ಸೇಲ್ಸ್ ಮ್ಯಾನೇಜರ್ ಆಶಿಶ್ ಭಂಡಾರಿ ಹಾಗೂ ಮತ್ತಿತರರು ಉಪಸ್ಥಿತ ರಿದ್ದರು.