ಮುನಿಯಾಲು ಆಯುರ್ವೇದ ಕಾಲೇಜು ಮಣಿಪಾಲದಲ್ಲಿ ವೈದ್ಯರಿಗೆ, ಸ್ನಾತಕೋತ್ತರ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಆಯುರ್ವೇದ ವಿಚಾರ ಸಂಕೀರ್ಣವನ್ನು ೨೭.೦೭.೨೦೨೨ ರಂದು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ.ಸತ್ಯನಾರಯಣ ಬಿ, ಸಂಪನ್ಮೂಲ ವ್ಯಕ್ತಿಗಳಾದ ಡಾ.ಮುರಳೀಧರ ಶರ್ಮ, ಕಾಯಚಿಕಿತ್ಸಾ ವಿಭಾಗದ ಮುಖ್ಯಸ್ಥರಾದ ಡಾ.ಶ್ರೀಪತಿ ಆಚಾರ್ಯ, ಸ್ನಾತಕೋತ್ತರ ಪದವಿ ವಿಭಾಗದ ಮುಖ್ಯಸ್ಥರಾದ ಡಾ.ಗುರುರಾಜ್ ತಂತ್ರಿ ಹಾಗೂ ಕಾಯಚಿಕಿತ್ಸಾ ವಿಭಾಗದ ಸಹಪ್ರಾಧ್ಯಾಪಕರಾದ ಡಾ.ಪ್ರಮೋದ್ ಶೇಟ್ ಇವರುಗಳು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಡಾ.ಮುರಳೀಧರ ಶರ್ಮ ಇವರು ಉದರ ಸಂಬoಧಿ ಕಾಯಿಲೆಗಳ ಬಗ್ಗೆ ಸವಿಸ್ತಾರವಾಗಿ ಮಾಹಿತಿಯನ್ನು ನೀಡಿದರು.