ಮುರುಗ ಶ್ರೀಗೆ ಸಂಕಷ್ಟ ದೊಳಗೊಂದು ಸಂಕಷ್ಟ…!

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ ನಡೆಸಿದ ಆರೋಪದಡಿ ಬಂದಿತರಾಗಿರುವ ಮುರುಘಾ ಮಠದ ಶ್ರೀಗಳ ಮೇಲೆ ಸಾಮಾಜಿಕ ಕಾರ್ಯಕರ್ತ ಮಧು ಎನ್ನುವ ವ್ಯಕ್ತಿ ಚಿತ್ರದುರ್ಗ ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿ ,ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದು ಅಲ್ಲದೆ, ಮೈಸೂರಿನ ಮುರುಘಾ ಮಠದ ಅಡುಗೆ ಸಹಾಯಕಿಯೊಬ್ಬರು, ಶ್ರೀಗಳು ತಮ್ಮ ಮಕ್ಕಳ ಮೇಲೆಯೂ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ.

ಮಠದಲ್ಲಿ ಕೆಲವರನ್ನು ರಕ್ಷಣೆ ಮಾಡುತ್ತಿರುವುದು ಕಂಡು ಬರುತ್ತಿದೆ ಆದ್ದರಿಂದ ನ್ಯಾಯಾಧೀಶರು ಮಠಕ್ಕೆ ಹೋಗಿ ಮಾತನಾಡಬೇಕು. ಎರಡುವರೆ ವರ್ಷಗಳಿಂದ ಮಕ್ಕಳ ಮೇಲೆ ಲೈಂಗಿಕ ದೌರ್ಜನ ನಡೆಯುತ್ತಿದೆ .ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಬೇಕು. ಮಕ್ಕಳಿಗೆ ಕೌನ್ಸಿಲಿಂಗ್ ಮಾಡಿದರೆ ಇನ್ನಷ್ಟು ಪ್ರಕರಣಗಳು ಹೊರ ಬರುತ್ತಿತ್ತು ಎಂದು ಒಡನಾಡಿ ಸಂಸ್ಥೆಯ ಸ್ಟಾನ್ ಲಿ ಹೇಳಿದ್ದಾರೆ.

ಲೈಂಗಿಕ ಕಿರುಕುಳ ಆರೋಪದಲ್ಲಿ ಜೈಲಿನಲ್ಲಿ ವಿಚಾರಣೆ ಎದುರಿಸುತ್ತಿರುವ ಮುರುಘಾ ಮಠದ ಶ್ರೀಗಳ ವಿರುದ್ಧ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಮತ್ತೊಂದು ಎಫ್ಐಆರ್ ದಾಖಲಿಸಲಾಗಿದೆ. ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

 
 
 
 
 
 
 
 
 
 
 

Leave a Reply