ಮೈಸೂರಿನ ಪರೀಕ್ಷಾ ಕೇಂದ್ರದಲ್ಲೆ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿ ಸಾವು

ಮೈಸೂರು- ತೀವ್ರ ಹೃದಯಾಘಾತದಿಂದ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯೊಬ್ಬಳು ಪರೀಕ್ಷಾ ಕೇಂದ್ರದಲ್ಲೆ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ತಿ.ನರಸೀಪುರ ತಾಲೂಕು ಅಕ್ಕೂರಿನ ವಾಸಿ ಅನುಶ್ರೀ (16) ಮೃತಪಟ್ಟ ವಿದ್ಯಾರ್ಥಿನಿ.

ಮಾದಾಪುರ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅನುಶ್ರೀ ಪರೀಕ್ಷೆ ಬರೆಯಲು ವಿದ್ಯೋದಯ ಸರ್ಕಾರಿ ಶಾಲೆಗೆ ಬಂದಿದ್ದಳು. ಪರೀಕ್ಷೆ ಬರೆಯುವ ವೇಳೆ ಅನುಶ್ರೀ ಮೇಜಿನ ಮೇಲೆ ಕುಸಿದು ಬಿದ್ದಳು. ಕೂಡಲೇ ಆಕೆಯನ್ನು ತಿ.ನರಸೀಪುರದ ಸರ್ಕಾರಿ ಆಸ್ಪತ್ರಗೆ ಕರೆದೊಯ್ಯಲಾಯಿತು. 

ಅಷ್ಟೊತ್ತಿಗೆ ಅನುಶ್ರೀ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಪರೀಕ್ಷೆಯ ಒತ್ತಡದಿಂದ ತೀವ್ರ ಹೃದಯಾಘಾತವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದೇ ವೇಳೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದರು.

 
 
 
 
 
 
 
 
 
 
 

Leave a Reply