ನಾವುಂದ: ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದ ವಿದ್ಯಾರ್ಥಿನಿಗೆ ಪ್ರೋತ್ಸಾಹ ಧನ

ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಾಲೇಜಿಗೆ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದ ವಿದ್ಯಾರ್ಥಿನಿ ಸುರಕ್ಷ ಶೆಟ್ಟಿ ಅವರಿಗೆ 1995 -96ನೇ ಸಾಲಿನ ಕಾಲೇಜಿನ ವಿಜ್ಞಾನ ವಿಭಾಗದ ಹಳೆಯ ವಿದ್ಯಾರ್ಥಿಗಳು ನೀಡಿದ 15000 ರೂಪಾಯಿ ಪ್ರೋತ್ಸಾಹ ಧನವನ್ನು ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ ವಿತರಿಸಲಾಯಿತು. ಹಳೆ ವಿದ್ಯಾರ್ಥಿಗಳ ಪರವಾಗಿ ಭಾಷ್ ಟೆಕ್ ನಲ್ಲಿ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿರುವ ವಿನಾಯಕ ಹೆಬ್ಬಾರ್ ವಿದ್ಯಾರ್ಥಿನಿಗೆ ಪ್ರೋತ್ಸಾಹಧನವನ್ನು ವಿತರಿಸಿದರು . ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾವುಂದ ಸರಕಾರಿ ಕಾಲೇಜಿನ ಪ್ರಾಂಶುಪಾಲ ಅರುಣ್ ನಾಯ್ಕ್ ವಹಿಸಿದ್ದರು ರಸಾಯನಶಾಸ್ತ್ರ ಉಪನ್ಯಾಸಕಿ ಸುಮಿತ್ರ ಸ್ವಾಗತಿಸಿದರು. ಗಣಿತಶಾಸ್ತ್ರ ಉಪನ್ಯಾಸಕಿ ಸಾವಿತ್ರಿ ಎಸ್.ಕಾರ್ಯಕ್ರಮ ನಿರೂಪಿಸಿದರು ಇತಿಹಾಸ ಉಪನ್ಯಾಸಕ ಗಣೇಶ್ ಎಂ. ವಂದಿಸಿದರು

 
 
 
 
 
 
 
 
 
 
 

Leave a Reply