ಸ್ವಾಮೀಜಿ ವೇಷದಲ್ಲಿದ್ದ ಆ್ಯಸಿಡ್​ ದಾಳಿಕೋರ ನಾಗೇಶ್​ ಬಂಧನ.

ಬೆಂಗಳೂರು: ಸುಂಕದಕಟ್ಟೆಯಲ್ಲಿ ಹಾಡಹಗಲೇ ಯುವತಿಯ ಮೇಲೆ ಆ್ಯಸಿಡ್​ ದಾಳಿ ನಡೆಸಿ ಪರಾರಿಯಾಗಿದ್ದ ಆರೋಪಿ ನಾಗೇಶ್​ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಸ್ವಾಮೀಜಿ ವೇಷಧಾರಿಯಾಗಿ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನ ಶುಕ್ರವಾರ ಬಂಧಿಸಲಾಗಿದೆ.

ಪ್ರೀತಿಸಲು ಒಲ್ಲೆ ಎಂದ 24 ವರ್ಷದ ಯುವತಿ ಮೇಲೆ ಏ.28ರ ಗುರುವಾರ ಬೆಳಗ್ಗೆ ಕಾಮಾಕ್ಷಿಪಾಳ್ಯ ಪೊಲೀಸ್​ ಠಾಣಾ ವ್ಯಾಪ್ತಿಯ ಸುಂಕದಕಟ್ಟೆಯ ಮುತ್ತೂಟ್ ಫೈನಾನ್ಸ್ ಬಳಿ ಭಗ್ನಪ್ರೇಮಿ ನಾಗೇಶ್​ ಆ್ಯಸಿಡ್​ ಹಾಕಿ ಪರಾರಿಯಾಗಿದ್ದ. ನೋವಲ್ಲಿ ನರಳಾಡುತ್ತಿದ್ದ ಆಕೆಯನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಸಾವು-ಬದುಕಿನ ನಡುವೆ ಯುವತಿ ಹೋರಾಡುತ್ತಿದ್ದು, ಚಿಕಿತ್ಸೆ ಮುಂದುವರಿದಿದೆ. ಮಗಳ ದಯನೀಯ ಸ್ಥಿತಿ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅತ್ತ ತಲೆಮರೆಸಿಕೊಂಡಿದ್ದ ನಾಗೇಶ್​ನ ಪತ್ತೆಗಾಗಿ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಎಲ್ಲೆಡೆ ಹುಡುಕಾಟ ನಡೆಸಿದ್ದರು.

16 ದಿನದ ಬಳಿಕ ತಿರುವಣ್ಣಾಮಲೈನ ಆಶ್ರಮವೊಂದರಲ್ಲಿ ಸ್ವಾಮೀಜಿ ವೇಷದಲ್ಲಿ ಇರುವುದು ಖಚಿತಪಡಿಸಿಕೊಂಡ ಪೊಲೀಸರು ಭಕ್ತರ ಸೋಗಲ್ಲಿ ಆಶ್ರಮಕ್ಕೆ ತೆರಳಿದ್ದರು. ಕೊನೆಗೂ ಆರೋಪಿ ನಾಗೇಶ್​ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

 
 
 
 
 
 
 
 
 
 
 

Leave a Reply