ಗೋಶಾಲೆ ನಿರ್ವಹಣೆಗೆ ಧನಸಹಾಯ:
ಕೇಂದ್ರ ವಿತ್ತ ಸಚಿವೆಗೆ ಪೇಜಾವರಶ್ರೀ ಮನವಿ.

ಗೋಶಾಲೆಗಳಿಗೆ 200 ಕೋಟಿ ರೂ ಪ್ಯಾಕೇಜ್ ನೀಡಲು ಒತ್ತಾಯ

ಕೊರೊನಾ ವಿಪತ್ತಿನಿಂದ ದೇಶದ ನೂರಾರು ಗೋಶಾಲೆಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದು ತುರ್ತಾಗಿ ಕನಿಷ್ಠ 200 ಕೋಟಿ ರೂಗಳ ನಿರ್ವಹಣಾ ನಿಧಿಯನ್ನು ನೀಡಬೇಕೆಂದು ಒತ್ತಾಯಿಸಿ ಉಡುಪಿ ಗೋವರ್ಧನ ಗಿರಿ ಟ್ರಸ್ಟ್ ( ರಿ) ಅಧ್ಯಕ್ಷ , ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಕೇಂದ್ರ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಗೆ ಪತ್ರ ಬರೆದಿದ್ದಾರೆ .

ಕಳೆದ ಆರೇಳು ತಿಂಗಳುಗಳಿಂದ ಕೊರೊನಾದಿಂದಾಗಿ ವಿವಿಧ ಕ್ಷೇತ್ರಗಳು ಗಂಭೀರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರು ವಂತೆಯೇ ದೇಶದ ಗೋಶಾಲೆಗಳೂ ತೊಂದರೆಗೊಳಗಾಗಿವೆ .ಗೋಶಾಲೆಗಳ ನಿರ್ವಹಣೆ ಅತ್ಯಂತ ವೆಚ್ಚದಾಯಕವಾಗಿದೆ. ಉಡುಪಿಯಲ್ಲಿ ನೀಲಾವರ, ಕೊಡವೂರು, ಹೆಬ್ರಿಯಲ್ಲಿ ನಾವು ನಡೆಸುತ್ತಿರುವ ಗೋಶಾಲೆ ಗಳಿಗೇ ಮಾಸಿಕ ಅಂದಾಜು 35 ಲಕ್ಷ ರೂ ನಿರ್ವಹಣಾ ವೆಚ್ಚ ಇದೆ .

ಅದೇ ರೀತಿಯಲ್ಲಿ ಇದಕ್ಕೊ ದೊಡ್ಡ ಅಥವಾ ಸಣ್ಣ ಮಟ್ಟದ ಗೋಶಾಲೆಗಳನ್ನು ಅನೇಕ ಮಠ, ದೇವಳ ಹಾಗೂ ಮಹನೀಯರು ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಕರ್ತವ್ಯದ ದೃಷ್ಟಿ ಯಿಂದ ನಡೆಸುತ್ತಾ ಲಕ್ಷಾಂತರ ಗೋವು ಗಳನ್ನು ಪೋಷಿಸುತ್ತಿದ್ದಾರೆ .

ಧರ್ಮಾಭಿಮಾನಿಗಳ ಸಹಕಾರದಿಂದ ಇದು ಸಾಧ್ಯವಾಗುತ್ತಿತ್ತು. ಆದರೆ ಪ್ರಸ್ತುತ ಭಕ್ತರ ದೇಣಿಗೆಯೂ ಅಷ್ಟಾಗಿ ಬರುತ್ತಿಲ್ಲ, ಮೇಲಾಗಿ ಎರಡು ತಿಂಗಳಿನಿಂದ ದೇಶದ ಕೆಲವೆಡೆಗಳಲ್ಲಿ ವಿಪರೀತ ಮಳೆಯೂ ಸುರಿಯುತ್ತಿರುವು ದರಿಂದ ಮೇವಿನ ಸಂಗ್ರಹಣೆಯೂ ದುಸ್ತರ ವಾಗುತ್ತಿದೆ .

ಆದ್ದರಿಂದ ಕೊರೊನಾ ವಿಪತ್ತನ್ನು ಎದುರಿಸಲು ಬೇರೆ ಬೇರೆ ಕ್ಷೇತ್ರಗಳಿಗೆ ಸರಕಾರವು ಆರ್ಥಿಕ ಪ್ಯಾಕೇಜ್ ಘೋಷಿಸಿ ದಂತೆ ಗೋಶಾಲೆಗಳಿಗೂ ಕನಿಷ್ಠ 200 ಕೋಟಿಯಾದರೂ ತುರ್ತಾಗಿ ನೀಡಿ ಗೋರಕ್ಷಣೆಯ ಕೈಂಕರ್ಯದಲ್ಲಿ ಕೈಜೋಡಿ ಸಬೇಕು . ಕೇವಲ ಧರ್ಮ‌ ಮಾತ್ರವಲ್ಲದೇ ಆರ್ಥಿಕತೆಯ ಹಿತದೃಷ್ಟಿ ಯಿಂದಲೂ ಗೋರಕ್ಷಣೆಯನ್ನು ಆದ್ಯತೆಯಾಗಿ ಪರಿಗಣಿಸ ಬೇಕೆಂದು ಪೇಜಾವರ ಶ್ರೀಗಳು ಒತ್ತಾಯಿ ಸಿದ್ದಾರೆ .‌

 
 
 
 
 
 
 
 
 

Leave a Reply