ಅರ್ನಬ್ ಗೋಸ್ವಾಮಿ ಅವರ ಭದ್ರತೆ ಮತ್ತು ಆರೋಗ್ಯಕ್ಕೆ  ವಿಚಾರಿಸಿದ  ಮಹಾರಾಷ್ಟ್ರ ರಾಜ್ಯಪಾಲ ಭಗತ್‌ ಸಿಂಗ್ ಕೋಶಯಾರಿ

ಆತ್ಮಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ರಿಪಬ್ಲಿಕ್ ಟಿ.ವಿ. ಸಂಪಾದಕ ಅರ್ನಬ್ ಗೋಸ್ವಾಮಿ ಅವರ ಭದ್ರತೆ ಮತ್ತು ಆರೋಗ್ಯಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ರಾಜ್ಯಪಾಲ ಭಗತ್‌ ಸಿಂಗ್ ಕೋಶಯಾರಿ ​ವಿಚಾರಿಸಿದ್ದಾರೆ. ​

ಅವರು ಗೃಹಸಚಿವ ಅನಿಲ್ ದೇಶ್‌ಮುಖ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ​. ​ಅವರ ಕುಟುಂಬಕ್ಕೆ ಅರ್ನಬ್ ಅವರನ್ನು ಭೇಟಿ ಮಾಡಿ ಮಾತನಾಡಲು​ ​ಅವಕಾಶ ನೀಡ​​ಬೇಕೆಂದು ರಾಜ್ಯಪಾಲರು ಗೃಹಸಚಿವರಿಗೆ ಸೂಚಿಸಿದ್ದಾರೆ ಎಂದು ರಾಜ್ಯಪಾಲರ ಕಚೇರಿಯ ಪ್ರಕಟಣೆ ಸೋಮವಾರ ತಿಳಿಸಿದೆ.

 
 
 
 
 
 
 
 
 
 
 

Leave a Reply