ಆತ್ಮಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ರಿಪಬ್ಲಿಕ್ ಟಿ.ವಿ. ಸಂಪಾದಕ ಅರ್ನಬ್ ಗೋಸ್ವಾಮಿ ಅವರ ಭದ್ರತೆ ಮತ್ತು ಆರೋಗ್ಯಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಯಾರಿ ವಿಚಾರಿಸಿದ್ದಾರೆ.
ಅವರು ಗೃಹಸಚಿವ ಅನಿಲ್ ದೇಶ್ಮುಖ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಅವರ ಕುಟುಂಬಕ್ಕೆ ಅರ್ನಬ್ ಅವರನ್ನು ಭೇಟಿ ಮಾಡಿ ಮಾತನಾಡಲು ಅವಕಾಶ ನೀಡಬೇಕೆಂದು ರಾಜ್ಯಪಾಲರು ಗೃಹಸಚಿವರಿಗೆ ಸೂಚಿಸಿದ್ದಾರೆ ಎಂದು ರಾಜ್ಯಪಾಲರ ಕಚೇರಿಯ ಪ್ರಕಟಣೆ ಸೋಮವಾರ ತಿಳಿಸಿದೆ.