ಕಿಸಾನ್ ಸಮ್ಮಾನ್ ನಿಧಿಯ 9 ನೇ ಕಂತು ರೈತರ ಖಾತೆಗಳಿಗೆ ವರ್ಗಾವಣೆ

ನವದೆಹಲಿ : ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಕಿಸಾನ್ ಸಮ್ಮಾನ್ ನಿಧಿಯ 9 ನೇ ಕಂತಿನ ಒಟ್ಟು ರೂಪಾಯಿ 19,000 ಕೋಟಿಗಳನ್ನು ದೇಶದ 9.5 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದರು. 

ವಿಡಿಯೋ ಕಾನ್ಫೆರನ್ಸ್ ಮೂಲಕ ನಡೆದ ಈ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ರಾಜ್ಯ ಖಾತೆ ಸಚಿವ ಕೈಲಾಶ್ ಚೌಧರಿ ಹಾಗೂ ಕೃಷಿ ಸಚಿವಾಲಯದ ಅಧಿಕಾರಿಗಳು ಭಾಗವಹಿಸಿದರು.

 
 
 
 
 
 
 
 
 
 
 

Leave a Reply