ಕುವೈಟ್ ನಿಂದ ಭಾರತಕ್ಕೆ ಬಂದ ಆಕ್ಸಿಜನ್ ಕಂಟೈನರ್ ಹಡಗು

ಮಂಗಳೂರು: ಕುವೈಟ್ ಸರಕಾರ ಭಾರತದೊಂದಿಗಿನ ಸಧೃಡ ಅಂತರಾಷ್ಟ್ರೀಯ ಭಾಂದವ್ಯದ ಪ್ರತೀಕವಾಗಿ ಎರಡು ಕಂಟೈನರ್ ಗಳಲ್ಲಿ ಮೆಡಿಕಲ್ ಆಕ್ಸಿಜನ್, ಟ್ಯಾಂಕ್ಸ್, ಆಕ್ಸಿಜನ್ ಕಾನ್ಸೆನ್ಟ್ರೇಟರ್ ಪೂರೈಕೆಗೆ ನಿರ್ಧರಿಸಿದೆ. ಅದರ ಒಂದು ಹಡಗು ಸೋಮವಾರ ನವಮಂಗಳೂರು ಬಂದರಿಗೆ ಬಂದಿದೆ.

ಮಂಗಳವಾರ ಇನ್ನೆರಡು ಹಡಗುಗಳ ಮೂಲಕ ನಾಲ್ಕು ಕಂಟೈನರ್ ಗಳಲ್ಲಿ ವೈದ್ಯಕೀಯ ಆಮ್ಲಜನಕದ ಪೂರೈಕೆಯಾಗಲಿದೆ. ಮಂಗಳೂರು ನಗರ ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಹಾಗೂ ಪ್ರಮುಖರು ಹಡಗನ್ನು ಬರಮಾಡಿಕೊಂಡರು .ಕುವೈಟ್ ಸರಕಾರ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿಜಿಯವರಿಗೆ ಶಾಸಕ ಡಾ.ವೈ ಭರತ್ ಶೆಟ್ಟಿಯವರು ಧನ್ಯವಾದ ಅರ್ಪಿಸಿದರು.

 
 
 
 
 
 
 
 
 
 
 

Leave a Reply