ಕೇರಳದಲ್ಲಿ ಶಾಸಕ ರಘುಪತಿ ಭಟ್ ಚುನಾವಣಾ ಪ್ರಚಾರ

ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆ ಬುಧವಾರ ಪಲ್ಲಖಾಡ್ ಜಿಲ್ಲೆಯ ಮಲಂಪುಜಾ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೃಷ್ಣ ಕುಮಾರ್ ಅವರ ಪರವಾಗಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡರು.

ರಘುಪತಿ ಭಟ್ ಮಾತನಾಡಿ ಭಾರತೀಯ ಜನತಾ ಪಾರ್ಟಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳು, ಹಮ್ಮಿಕೊಂಡಿರುವ ಕಾರ್ಯಕ್ರಮಗಳು ಜನಸಾಮಾನ್ಯರನ್ನು, ರೈತರನ್ನು ಶಸಕ್ತರನ್ನಾಗಿ ರೂಪಿಸುತ್ತಿದೆ. ಕೋವಿಡ್ – 19 ಮಹಾಮಾರಿಯಂತಹ ಸಂಕಷ್ಟದ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿದ ಪ್ರಧಾನಿ ನರೇಂದ್ರ ಮೋದಿ ಯವರನ್ನು ವಿಶ್ವವೇ ಮೆಚ್ಚಿದೆ. ಭಾರತವನ್ನು ವಿಶ್ವಗುರುವನ್ನಾಗಿಸುವ ನಿಟ್ಟಿನಲ್ಲಿ ಅವರಿಡುತ್ತಿರುವ ಹೆಜ್ಜೆಗೆ ನಾವು ಬೆಂಬಲವನ್ನು ನೀಡಬೇಕು. ಈ ನಿಟ್ಟಿನಲ್ಲಿ ಕೇರಳದಲ್ಲಿ ಅತಿಹೆಚ್ಚಿನ ಸ್ಥಾನವನ್ನು ಗೆಲ್ಲುವಲ್ಲಿ ಎಲ್ಲರೂ ಒಂದು ತಂಡವಾಗಿ ಶ್ರಮಿಸಬೇಕು ಎಂದರು.

ಮಲಂಪುಜಾ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಶ್ರೀ ಕೃಷ್ಣ ಕುಮಾರ್ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply