ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದ ಪುನರ್ ರಚನೆಯಾಗಿದ್ದು 43 ಹೊಸ ಹಾಗೂ ಹಳೆಯ ಸಚಿವರು ಇಂದು ಸಂಜೆ ಆರು ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕರ್ನಾಟಕದ ಆರು ನಾಯಕರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಸಿಕ್ಕಿದೆ.
ಬೀದರ್ ಬಿಜೆಪಿ ಸಂಸದ ಭಗವಂತ್ ಖೂಬಾ,ಉಡುಪಿ-ಚಿಕ್ಕಮಗಳೂರಿನ ಸಂಸದೆ ಶೋಭಾ ಕರಂದ್ಲಾಜೆ, ಚಿತ್ರದುರ್ಗದ ಸಂಸದ ಆನೇಕಲ್ ನಾರಾಯಣಸ್ವಾಮಿ ಹಾಗೂ ರಾಜ್ಯಸಭೆ ಸದಸ್ಯರಾಗಿರುವ ರಾಜೀವ್ ಚಂದ್ರಶೇಖರ್ ಅವರಿಗೆ ಸಚಿವ ಸ್ಥಾನ ನೀಡಲಾಗುತ್ತಿದೆ.