ಬಾಲಿವುಡ್ ನಟ ಸಲ್ಮಾನ್ ಖಾನ್ರನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ತಡೆದು ನಿಲ್ಲಿಸಿ ಭಾರಿ ಮೆಚ್ಚುಗೆಗೆ ಪಾತ್ರರಾಗಿದ್ದ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್ಎಫ್) ಯುವ ಅಧಿ ಕಾರಿ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಕೆಲವು ದಿನಗಳ ಹಿಂದೆ ಸಲ್ಮಾನ್ ಖಾನ್ರನ್ನು ತಡೆದು ಭದ್ರತಾ ತಪಾಸಣೆ ನಡೆಸುವ ಮೂಲಕ ರಾತ್ರೋರಾತ್ರಿ ರಿಯಲ್ ಹೀರೋ ಆಗಿ ಎಲ್ಲರ ಗಮನ ಸೆಳೆದಿದ್ದ ಸೋಮನಾಥ್ ಮೊಹಂತಿ ಇದೀಗ ಚಿಕ್ಕದೊಂದು ತಪ್ಪಿನಿಂದ ಸಮಸ್ಯೆಗೆ ಸಿಕ್ಕಿಹಾಕಿ ಕೊಂಡಿದ್ದಾರೆ.
ಟೈಗರ್ 3 ಚಿತ್ರದ ಚಿತ್ರೀಕರಣಕ್ಕಾಗಿ ಸಲ್ಮಾನ್ ಖಾನ್ ಅವರು ವಿದೇಶಕ್ಕೆ ತೆರಳಲೆಂದು ಮುಂಬೈ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಮೊಹಂತಿ ಏರ್ಪೋರ್ಟ್ನಲ್ಲಿ ಕರ್ತವ್ಯದಲ್ಲಿದ್ದರು. ಬಹು ತೇಕರು ವಿಐಪಿಗಳು ಬಂದಾಗ ಭದ್ರತಾ ತಪಾಸಣೆ ನಡೆಸಲು ಹಿಂಜರಿಯುತ್ತಾರೆ.
ಆದರೆ, ಯಾವುದಕ್ಕೂ ಕ್ಯಾರೆ ಎನ್ನದೇ ಮೊಹಂತಿ ಅವರು ಸಲ್ಮಾನ್ ಭದ್ರತಾ ತಪಾಸಣೆ ನಡೆಸಿ ಕಳುಹಿಸಿ ದ್ದರು. ಸಲ್ಮಾನ್ ಖಾನ್ರನ್ನು ತಡೆದು ಸಾಮಾನ್ಯ ಜನರ ರೀತಿ ಸಾಲಿನಲ್ಲಿ ನಿಲ್ಲುವಂತೆ ಯು ಮತ್ತು ದಾಖಲಾತಿಗಳನ್ನು ತೋರಿಸುವಂತೆ ಹೇಳಿದರು.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದರಿಂದ ಹೀರೋ ಏನೋ ಆದರು. ಆದರೆ ಇದೇ ಅವರಿಗೆ ಮುಳುವಾಗಿದೆ. ಅದೇನೆಂದರೆ ವೈರಲ್ ವಿಡಿಯೋಗೆ ಸಂಬಂಧಿಸಿದಂತೆ ಮಾಧ್ಯಮವೊಂದಕ್ಕೆ ಮೊಹಂತಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಇದರಿಂದ ತೊಂದರೆಗೆ ಸಿಲುಕಿ ದ್ದಾರೆ. ಹೌದು, ಘಟನೆಗೆ ಸಂಬಂಧಿಸಿದಂತೆ ಅವರಿಂದ ಪ್ರತಿಕ್ರಿಯೆ ಪಡೆಯಲು ಮಾಧ್ಯಮ ಪ್ರತಿನಿಧಿಗಳು ಕರೆ ಮಾಡಿದಾಗ ಅವರು ಪ್ರತಿಕ್ರಿಯೆ ನೀಡಿಬಿಟ್ಟಿದ್ದಾರೆ.
ಅಸಲಿಗೆ ಸಿಐಎಸ್ಎಫ್ ಪ್ರೋಟೋಕಾಲ್ ಪ್ರಕಾರ ಅವರು ಮಾಧ್ಯಮಗಳ ಜತೆಗೆ ಹಿರಿಯ ಅಧಿಕಾರಿಗಳ ಪೂರ್ವಾನುಮತಿ ಇಲ್ಲದೆಯೇ ಮಾತುಕತೆ ನಡೆಸುವಂತಿರಲಿಲ್ಲ.
ಆದ್ದರಿಂದ ಇವರು ನಿಯಮ ಮೀರಿದ್ದರಿಂದ ಅವರ ಮೊಬೈಲ್ ಫೋನ್ ಅನ್ನು ಹಿರಿಯ ಅಧಿಕಾರಿ ಗಳು ವಶಕ್ಕೆ ಪಡೆದಿದ್ದಾರೆ, ಈಗ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.