ಕೇಂದ್ರ ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂಸದೆ ಶೋಭಾ ಕರಂದ್ಲಾಜೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯ ಸಚಿವ ಸಂಪುಟ ವಿಸ್ತರಣೆಯಲ್ಲಿ ನೂತನ ಕೇಂದ್ರ ರಾಜ್ಯ ಮಂತ್ರಿಯಾಗಿ ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಪ್ರಮಾಣ ವಚನ ಸ್ವೀಕರಿಸಿದರು.

ಉಡುಪಿ-ಚಿಕ್ಕಮಗಳೂರಿನ ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಸಂಪುಟದ ಪುನರ್ ರಚನೆಯಲ್ಲಿ ಬೀದರ್ ಬಿಜೆಪಿ ಸಂಸದ ಭಗವಂತ್ ಖೂಬಾ, ಚಿತ್ರದುರ್ಗದ ಸಂಸದ ಆನೇಕಲ್ ನಾರಾಯಣಸ್ವಾಮಿ ಹಾಗೂ ರಾಜ್ಯಸಭೆ ಸದಸ್ಯರಾಗಿರುವ ರಾಜೀವ್ ಚಂದ್ರಶೇಖರ್ ಅವರಿಗೆ ಸಚಿವ ಸ್ಥಾನ ದೊರೆತಿದೆ.

 
 
 
 
 
 
 
 
 
 
 

Leave a Reply