ಶೋಭಾ ಕರಂದ್ಲಾಜೆಯಿಂದ ಅಯೋಧ್ಯೆ ವಿಧಾನಸಭಾ ಕ್ಷೇತ್ರದಲ್ಲಿ ಮನೆ-ಮನೆ ಪ್ರಚಾರ

ಅಯೋಧ್ಯೆ : ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರು ಮತ್ತು ಉತ್ತರ ಪ್ರದೇಶ ಚುನಾವಣಾ ಸಹ-ಪ್ರಭಾರಿ ಶೋಭಾ ಕರಂದ್ಲಾಜೆ ಅವಧ್ ಪ್ರದೇಶದ ಅಯೋಧ್ಯೆ ವಿಧಾನಸಭಾ ಕ್ಷೇತ್ರದಲ್ಲಿ ಮನೆ-ಮನೆ ಪ್ರಚಾರ ಕೈಗೊಂಡರು.

ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಮರ್ಥ ನಾಯಕತ್ವದಲ್ಲಿ ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಭವ್ಯ ಮಂದಿರವನ್ನು ನಿರ್ಮಿಸಲಾಗುತ್ತಿದೆ. ನಮ್ಮ ಪ್ರಧಾನಿ ದೇಶದ ಬಹುಕಾಲದ ಬೇಡಿಕೆಯನ್ನು ಅರಿತು ಸಾಂಸ್ಕೃತಿಕ ಪುನರುಜ್ಜೀವನವನ್ನು ಎತ್ತಿ ಹಿಡಿದಿದ್ದಾರೆ ಹಾಗೂ ಉತ್ತರ ಪ್ರದೇಶದಲ್ಲಿ ಯೋಗಿ ನೇತೃತ್ವದಲ್ಲಿ ಅಭಿವೃದ್ಧಿಯ ಹೊಸ ಶಕೆಯು ಆರಂಭವಾಗಿದ್ದು, ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಮುಂಬರುವ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುವಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅಭಿಪ್ರಾಯ ಪಟ್ಟಿದ್ದಾರೆ.

 
 
 
 
 
 
 
 
 
 
 

Leave a Reply