ನವದೆಹಲಿ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಕಾರಿಣಿ ಸಭೆ

ನವದೆಹಲಿ : ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟೀಯ ಪದಾಧಿಕಾರಿಗಳು ಹಾಗೂ ರಾಜ್ಯಾಧ್ಯಕ್ಷರ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿದರು.

ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾದ ಡಾ ಲಕ್ಷ್ಮಣ್ ಜೀ ರವರ ಅಧ್ಯಕ್ಷತೆ ಯಲ್ಲಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಭಾರಿಗಳಾದ ಶ್ರೀ ಅರುಣ್ ಸಿಂಗ್ ಜೀ,  ಕೇಂದ್ರ ಕಾನೂನು ಮತ್ತು ನ್ಯಾಯ ರಾಜ್ಯ ಸಚಿವರಾದ ಶ್ರೀ ಎಸ್ ಪಿ ಸಿಂಗ್ ವಘೇಲಾ ಜೀ ಉಪಸ್ಥಿತಿಯಲ್ಲಿ ನಡೆದಿದ್ದ ಸಭೆಯಲ್ಲಿ ಮೋರ್ಚಾದ  ರಾಜ್ಯಾಧ್ಯಕ್ಷರು ಹಾಗೂ ರಾಷ್ಟ್ರೀಯ ಪದಾಧಿಕಾರಿಗಳು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ  ಶ್ರೀ ಯಶ್ ಪಾಲ್ ಸುವರ್ಣ ರವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿಗಳಾದ ಶ್ರೀ ಅರುಣ್ ಸಿಂಗ್ ಜೀ ಯವರಿಗೆ ಉಡುಪಿ ಶ್ರೀ ಕೃಷ್ಣ ಮಠದ ಪ್ರಸಾದವನ್ನು ನೀಡಿ ಅಭಿನಂದನೆ ಸಲ್ಲಿಸಿದರು.
 
 
 
 
 
 
 
 
 
 
 

Leave a Reply