ನವರಾತ್ರಿಯ ಆರನೇ ದಿನದ ದೇವಿ “ಕಾತ್ಯಾಯಿನಿ”

ನವರಾತ್ರಿ ಹಬ್ಬದ ಆರನೇ ದಿನ ಕಾತ್ಯಾಯಿನಿ ದೇವಿಯನ್ನು ಪೂಜಿಸಲಾಗುತ್ತದೆ. ಈಕೆ ಮಹಿಷಾಸುರ ಮರ್ದಿನಿ, ಸುಜನರಕ್ಷಕಿ. ಈ ದಿನ ತಾಯಿಯನ್ನು ಪೂಜಿಸುವವರಿಗೆ ಆಯುರಾರೋಗ್ಯ ಭಾಗ್ಯ ಸದಾ ಇರುತ್ತದೆ ಇರುತ್ತದೆ.

ಕಾತ್ಯಾಯಿನಿ ದೇವಿಯನ್ನು ಶತ್ರುಗಳಿಂದ ಮತ್ತು ತೊಂದರೆಗಳಿಂದ ಮುಕ್ತಿ ನೀಡುವವಳು ಎಂದು ಪರಿಗಣಿಸಲಾಗಿದೆ. ದೇವತೆಗಳನ್ನು ರಾಕ್ಷಸರಿಂದ ರಕ್ಷಿಸಿದ ದೇವತೆ ಈಕೆ. ಈ ತಾಯಿ ಮಹಿಷಾಸುರನನ್ನು ಕೊಂದಳು, ನಂತರ ಶುಂಭ ಮತ್ತು ನಿಶುಂಭರನ್ನೂ ಕೂಡ ಕೊಂಡಳು. ಅಷ್ಟೇ ಅಲ್ಲ, ರಾಕ್ಷಸರು ಸೆರೆಯಲ್ಲಿ ಇಟ್ಟಿದ್ದ ಎಲ್ಲಾ ಒಂಬತ್ತು ಗ್ರಹಗಳು ಕೂಡ ಈಕೆಯ ಮೂಲಕ ಬಿಡುಗಡೆ ಹೊಂದಿದವು. 
ಈಕೆಯ ಕತೆ ಹೀಗಿದೆ.

ಮಹರ್ಷಿ ಕಾತ್ಯಾಯನರು ದೇವಿ ಆದಿಶಕ್ತಿಗಾಗಿ ತೀವ್ರ ತಪಸ್ಸು ಮಾಡಿದರು. ಪರಿಣಾಮವಾಗಿ ಅವರು ದೇವಿಯನ್ನು ತಮ್ಮ ಮಗಳಾಗಿ ಪಡೆದರು. ದೇವಿಯು ಮಹರ್ಷಿ ಕಾತ್ಯಾಯನರ ಆಶ್ರಮದಲ್ಲಿ ಜನಿಸಿದಳು. ಕಾತ್ಯಾಯನರ ಮಗಳಾದ ಕಾರಣದಿಂದ ಅವಳನ್ನು ಕಾತ್ಯಾಯನಿ ಎಂದು ಕರೆಯಲಾಗುತ್ತದೆ. ದೇವಿಯು ಜನಿಸಲು ಮುನ್ನ ಮಹಿಷಾಸುರನೆಂಬ ರಾಕ್ಷಸನ ದೌರ್ಜನ್ಯವು ಲೋಕದಲ್ಲಿ ಬಹಳಷ್ಟು ಹೆಚ್ಚಾಗಿತ್ತು. ರಾಕ್ಷಸರು ಸ್ವರ್ಗ ಹಾಗೂ ಭೂಮಿಯಲ್ಲಿ ಗದ್ದಲ ಸೃಷ್ಟಿಸಿದರು. ಅಶ್ವಿನಿ ತಿಂಗಳ ಕೃಷ್ಣ ಪಕ್ಷದ ಚತುರ್ದಶಿಯಂದು ಕಾತ್ಯಾಯನ ಮುನಿ ಮನೆಯಲ್ಲಿ ತ್ರಿದೇವರ ಪ್ರಕಾಶಮಾನವಾದ ದೇವತೆ ಜನಿಸಿದಳು.

ಇದರ ನಂತರ ಕಾತ್ಯಾಯನ ಋಷಿ ತಾಯಿಯನ್ನು ಮೂರು ದಿನಗಳ ಕಾಲ ಪೂಜಿಸಿದರು. ಇದರ ನಂತರ, ದಶಮಿಯ ದಿನದಂದು, ಮಹಿಷಾಸುರನನ್ನು ತಾಯಿಯು ಕೊಂದಳು. ಶುಂಭ ಮತ್ತು ನಿಶುಂಭರೂ ಸ್ವರ್ಗದ ಮೇಲೆ ದಾಳಿ ನಡೆಸಿ ಹಾಳುಮಾಡಿದ್ದರು. ಇಂದ್ರನ ಸಿಂಹಾಸನವನ್ನು ಸಹ ಕಿತ್ತುಕೊಂಡಿದ್ದರು. ಅಷ್ಟೇ ಅಲ್ಲ ನವಗ್ರಹಗಳನ್ನೂ ಒತ್ತೆಯಾಳಾಗಿರಿಸಿಕೊಂಡಿದ್ದರು. ರಾಕ್ಷಸರು ಬೆಂಕಿ ಮತ್ತು ಗಾಳಿಯ ಶಕ್ತಿಯನ್ನು ಕೂಡ ವಶಪಡಿಸಿಕೊಂಡರು. ನೊಂದ ಎಲ್ಲಾ ದೇವತೆಗಳು ದೇವಿಯಿದ್ದ ಆಶ್ರಯಕ್ಕೆ ಹೋದರು ಮತ್ತು ಅವರನ್ನು ಅಸುರರ ದೌರ್ಜನ್ಯದಿಂದ ಮುಕ್ತಗೊಳಿಸುವಂತೆ ಪ್ರಾರ್ಥಿಸಿದರು. ತಾಯಿ ಈ ಅಸುರರನ್ನು ಕೊಂದು ಎಲ್ಲರನ್ನೂ ಅವರ ಭಯದಿಂದ ಮುಕ್ತಗೊಳಿಸಿದರು.

 
 
 
 
 
 
 
 
 
 
 

Leave a Reply