ನವ್ಯೋದಯ ಫ್ರೆಂಡ್ಸ್ ಕ್ಲಬ್ ವತಿಯಿಂದ ವಾಲಿಬಾಲ್ ಪಂದ್ಯಾಟ ಉದ್ಘಾಟನೆ

ಎರಡು ವರುಷಗಳ ಹಿಂದೆ ಮರಳು ಶೇಖರಣೆಯಿಂದ ಸಾರ್ವಜನಿಕರ ಸಿಟ್ಟಿಗೆ ಕಾರಣವಾಗಿದ್ದ ಹಿರಿಯಡ್ಕದ ಗಾಂಧಿ ಮೈದಾನದಲ್ಲಿ ಹಲವು ವರುಷಗಳ ನಂತರ ಪುನಃ ಕ್ರೀಡೆಗಳೆಗೆ ಚಾಲನೆ ಸಿಕ್ಕಂತಾಗಿದೆ.

ನವ್ಯೋದಯ ಫ್ರೆಂಡ್ಸ್ ಕ್ಲಬ್ ಹಿರಿಯಡಕ ಇವರ ಆಶ್ರಯದಲ್ಲಿ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಡುಪಿ ಇವರುಗಳ ಸಹಕಾರದೊಂದಿಗೆ ಇಂದು ವಾಲಿಬಾಲ್ ಪಂದ್ಯಾಟದ ಉದ್ಘಾಟನೆ ಗೊಂಡಿತು. ಈ ಪಂದ್ಯಾಟವನ್ನು ದಿನೇಶ್ ಮೆಂಡನ್ – ಜಿಲ್ಲಾ ಕಾರ್ಯದರ್ಶಿ, ವಿಶ್ವ ಹಿಂದೂ ಪರಿಷದ್ ಬಜರಂಗದಳ ಉಡುಪಿ ಇವರು ಉದ್ಘಾಟಿಸಿ ಶುಭ ಹಾರೈಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಪ್ರಸನ್ನ ಶೆಟ್ಟಿ ಕೊಡಂದಬೆಟ್ಟು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಸ್ಥಳೀಯ ಉದ್ಯಮಿಗಳಾದ ದಿನೇಶ್ ಪುತ್ರನ್ ಪಡ್ದಮ್, ಶಾಜಿ ಐ ಪಿ, ಹಾಗು ರಾಘವೇಂದ್ರ ನಾಯಕ್. ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಸುರೇಶ ನಾಯಕ್ ಮುಂಡುಜೆ, ಕ್ಲಬ್ ನ ಅಧ್ಯಕ್ಷರಾದ ನರಸಿಂಹ ಕಾಮತ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕ್ಲಬ್ ನ ಕಾರ್ಯದರ್ಶಿ ಶರತ್ ಚೆನ್ನಿ ನಿರ್ವಹಿಸಿದ್ದರು.

 
 
 
 
 
 
 
 
 
 
 

Leave a Reply