ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾದ ದಿ. ಪ್ರವೀಣ್ ನೆಟ್ಟಾರು ಪತ್ನಿ

ಬಿಜೆಪಿ ಕಾರ್ಯಕರ್ತ ದಿ. ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಗುರುವಾರ ಜಿಲ್ಲಾಧಿಕಾರಿ ಕಚೇರಿಯ ಮುಖ್ಯಮಂತ್ರಿ ಪರಿಹಾರ ನಿಧಿ ವಿಭಾಗದಲ್ಲಿ ಗುತ್ತಿಗೆ ಆಧಾರದಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಸಿಎಂ ಬಸವರಾಜ್ ಬೊಮ್ಮಾಯಿ ಅವರ ಆದೇಶದ ಹಿನ್ನೆಲೆ ನೂತನ ಕುಮಾರಿಯವರಿಗೆ ಜಿಲ್ಲಾಧಿಕಾರಿ ಕಚೇರಿಯ ಮುಖ್ಯಮಂತ್ರಿಗಳ ಪರಿಹಾರ ನಿಧಿ ವಿಭಾಗದಲ್ಲಿ ಕೆಲಸ ಕೊಡಿಸಲಾಗಿದ್ದು, ಗುರುವಾರ ಬೆಳಿಗ್ಗೆ ನೇಮಕಾತಿ ಆದೇಶ ಪತ್ರ ಮತ್ತು ಅಗತ್ಯ ದಾಖಲೆಯನ್ನು ಕಚೇರಿಗೆ ಸಲ್ಲಿಸುವ ಮೂಲಕ ಕೆಲಸಕ್ಕೆ ಹಾಜರಾಗಿದ್ದಾರೆ .

 
 
 
 
 
 
 
 
 
 
 

Leave a Reply