ನಿತ್ಯಾನಂದರ ಅಂಬುಲೆನ್ಸ್‌ನಲ್ಲಿ ಐದು ಮಕ್ಕಳ ಜನನ..!!

ಉಡುಪಿ: ಕಳೆದ ಎರಡು ವರ್ಷಗಳಿಂದ ಸಂಪೂರ್ಣ ಹದಗೆಟ್ಟಿರುವ ಉಡುಪಿ ಇಂದ್ರಾಳಿ ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆಯ ದುರಸ್ತಿಗೆ ಆಗ್ರಹಿಸಿ ಉಡುಪಿ ಜಿಲ್ಲಾ ನಾಗರಿಕ ಸಮಿತಿ ನೇತೃತ್ವದಲ್ಲಿ ವಿನೂತನ ಪ್ರತಿಭಟನೆ‌ ನಡೆಯಿತು.

ಹೊಂಡಗುಂಡಿ ರಸ್ತೆಯಲ್ಲಿ ಎದ್ದುಬಿದ್ದು ಬಂದ ಅಂಬುಲೆನ್ಸ್ ನಲ್ಲಿ ಮಹಿಳೆಯೊಬ್ಬರು ಐದು ಮಕ್ಕಳಿಗೆ ಜನ್ಮ ನೀಡಿದರು. ಹೊಂಡಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ಗರ್ಭಿಣಿ ಸ್ತ್ರೀಯರನ್ನು ಕರೆದುಕೊಂಡು ಹೋದರೆ, ವಾಹನ ಬಿದ್ದು ರಸ್ತೆಯಲ್ಲೇ ಹೆರಿಗೆ ಆಗುತ್ತದೆ ಎಂಬುವುದನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ ಅಣಕು ಪ್ರದರ್ಶನದ ಮೂಲಕ ತೋರಿಸಲಾಯಿತು.

ಅಣಕು ಪ್ರದರ್ಶನದಲ್ಲಿ ರಾಜು ಮತ್ತು ಹರೀಶ್ ನಟಿಸಿದರು. ಪ್ರತಿಭಟನೆಗೆ ರೈಲು ನಿಲ್ದಾಣದ ಆಟೋ ಚಾಲಕರು ಟ್ಯಾಕ್ಸಿಮನ್ ಅಸೋಸಿಯೇಷನ್ ಬೆಂಬಲ ನೀಡಿದರು.
ಇಂದ್ರಾಳಿ ರೈಲ್ವೆ ಸ್ಟೇಷನ್ ರಸ್ತೆಯನ್ನು ಕೂಡಲೇ ದುರಸ್ತಿ ಮಾಡಬೇಕು. ರೈಲಿನ ಮೂಲಕ ಮಣಿಪಾಲಕ್ಕೆ ಹಲವಾರು ರೋಗಿಗಳು ಬರುತ್ತಾರೆ.

ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಉಡುಪಿ ಜಿಲ್ಲೆಗೆ ರೈಲಿನ ಮೂಲಕ ಬರುತ್ತಾರೆ. ಬಂದ ಹೊರ ರಾಜ್ಯದ ಹೊರ ಜಿಲ್ಲೆಯ ಜನ ಅಭಿವೃದ್ಧಿ ಹೊಂದಿದ ಉಡುಪಿಯಲ್ಲಿ ಇಂತಹ ಹೊಂಡ ಗುಂಡಿ ರಸ್ತೆಯೇ ಎಂದು ನಮ್ಮನ್ನು ಕೇಳುವಾಗ ನಮಗೂ ಇರುಸು ಮುರುಸಾಗುತ್ತದೆ. ಹಾಗಾಗಿ ಕೂಡಲೇ ರಸ್ತೆ ದುರಸ್ತಿಗೊಳಿಸಿ ಎಂದು ನಿತ್ಯಾನಂದ ಒಳಕಾಡು ಒತ್ತಾಯಿಸಿದರು.

 
 
 
 
 
 
 
 
 
 
 

Leave a Reply