ತನ್ನದೇ ದೇಶ, ಸಂವಿಧಾನ, ತತ್ವಗಳನ್ನು ನಿರ್ಮಿಸಿದ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಮತ್ತೆ ಸುದ್ದಿಯಲ್ಲಿದ್ದಾನೆ.
ವಿಶ್ವದ ಎಲ್ಲಾ ಮಹಿಳೆಯರಿಗೆ ಹೆರಿಗೆಗೆ ತನ್ನ ದೇಶ ಕೈಲಾಸಕ್ಕೆ ಬಂದರೆ ವಿಶೇಷ ಆಫರ್ ನೀಡುವುದಾಗಿ ಹೇಳಿದ್ದಾನೆ. ನೀವು ಯಾವ ದೇಶದವರಾಗಿದ್ದರೂ ತೊಂದರೆ ಇಲ್ಲ ಹೆರಿಗೆಗೆ ಕೈಲಾಸಕ್ಕೆ ಬನ್ನಿ ಎಂದಿದ್ದಾನೆ.
ಕೈಲಾಸದಲ್ಲಿ ಹೆರಿಗೆಯಾಗುವ ಪ್ರತಿ ಮಗುವಿಗೆ, ವಿಶೇಷವಾದ ಅಲೌಕಿಕವಾದ ಪ್ರಕಾಶಮಾನವಾದ ಶಕ್ತಿಯುಳ್ಳ ಡಿಎನ್ಎ ನೀಡಲಾಗುವುದು, ಅಲ್ಲದೇ ಕೈಲಾಸದಲ್ಲಿ ಹೆರಿಗೆಯಾದರೆ ಏನೇನು ಪ್ರಯೋಜನಗಳಿವೆ ಎಂದು ವೀಡಿಯೋ ಮೂಲಕ ವಿವರಿಸಿದ್ದಾನೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ವೈರಲ್ ಆಗುತ್ತಿದೆ.
ಕೈಲಾಸದಲ್ಲಿ ಇಡೀ ಬ್ರಹ್ಮಾಂಡಕ್ಕಾಗಿಯೇ ಮೀಸಲಾಗಿರುವ ಶಾಶ್ವತ ಕಾಸ್ಮಿಕ್ ಏರ್ಪೋರ್ಟ್ ಹಾಗೂ ಹೆರಿಗೆ ಆಸ್ಪತ್ರೆಯನ್ನು ಸದ್ಯದಲ್ಲೇ ನಿರ್ಮಿಸಲಾಗುತ್ತದೆ ಎಂದು ನಿತ್ಯಾನಂದ ಹೇಳಿಕೊಂಡಿದ್ದಾನೆ.