ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆಯ ಸ್ವಾತಂತ್ರ್ಯ ಓಟ

ಉಡುಪಿ : ೫೨ನೇ  ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆಯಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆ೦ಕನಿಡಿಯೂರು, ಉಡುಪಿ, ನೆಹರೂ ಯುವ ಕೇಂದ್ರ ಉಡುಪಿ, ಸರಕಾರಿ ಪದವಿ ಪೂರ್ವ ಕಾಲೇಜು, ತೆಂಕನಿಡಿಯೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಸ್ವಾತಂತ್ರ್ಯ ಓಟ ಹಾಗೂ ಫಿಟ್ ಇಂಡಿಯಾ ಓಟ ನಡೆಯಿತು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀ ವಿಶ್ವನಾಥ ಕರಬ ಓಟಕ್ಕೆ ಚಾಲನೆ ನೀಡಿದರು.
ಪ್ರಾಂಶುಪಾಲ ಡಾ. ಗಣನಾಥ ಎಕ್ಕಾರು ಭಾರತದ ಸ್ವಾತಂತ್ರೋತ್ತರ ಅಭಿವೃದ್ಧಿಯ ಮಹತ್ವವನ್ನು ವಿವರಿಸಿದರು. ನೆಹರು ಯುವ ಕೇಂದ್ರದ ಪರವಾಗಿ ಶ್ರೀ ಹರೀಶ್ ಕೋಟ್ಯಾನ್ ಇವರು ಶುಭ ಹಾರೈಸಿದರು. 
ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಅಧ್ಯಾಪಕರು ಹಾಗೂ ೩೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಓಟದಲ್ಲಿ ಪಾಲ್ಗೊಂಡಿದ್ದರು.
 
 
 
 
 
 
 
 
 
 
 

Leave a Reply