ಕಿದಿಯೂರಿನಲ್ಲಿ ಎನ್ಎಸ್ಎಸ್ ಕಾರ್ಯಕ್ರಮ

ಸ್ವಚ್ಛತೆ, ಆರೋಗ್ಯದ ಬಗ್ಗೆ ಎಚ್ಚರಿಕೆಯ ನಡೆ ಹಾಗೂ ಸರಿ ತಪ್ಪುಗಳ ಗ್ರಹಿಕೆ ವಿದ್ಯಾರ್ಥಿಗಳ ಆದ್ಯತೆಯಾಗಬೇಕೆಂದು ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ದಂತ ವೈದ್ಯ ಡಾ.ಶ್ರೀಕಾಂತ್ ತಿಳಿಸಿದ್ದಾರೆ. ಬಾಲಕಿಯರ ಸರಕಾರಿ ಪ ಪೂ ಕಾಲೇಜಿನ ವತಿಯಿಂದ ಕಿದಿಯೂರು ಪ್ರೌಢಶಾಲೆಯಲ್ಲಿ ನಡೆಯುತ್ತಿರುವ ಎನ್ಎಸ್ಎಸ್ ವಾರ್ಷಿಕ ಶಿಬಿರದಲ್ಲಿ ಸ್ವಚ್ಚತೆ ಮತ್ತು ದಂತ ಆರೋಗ್ಯದ ಕುರಿತು ಉಪನ್ಯಾಸ ನೀಡಿದರು. ವಿದ್ಯಾರ್ಥಿಗಳು ವಿದ್ಯಾರ್ಜನೆಯೊಂದಿಗೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನಹರಿಸಿ ಆರೋಗ್ಯವಾಗಿರುವಂತೆ ಕರೆ ನೀಡಿದರು.ಶಿಬಿರದ ಕಾರ್ಯಕ್ರಮಾಧಿಕಾರಿ ಗಿರಿಜಾ ಹೆಗಡೆ ಅಧ್ಯಕ್ಷತೆ ವಹಿಸಿದ್ದರು ಉಪನ್ಯಾಸಕರಾದ ದಯಾನಂದ್ ಡಿ, ಶಾಲಿನಿ,ಪೂಜಾ ಕಿದಿಯೂರು ಮಹಿಳಾ ಮಂಡಳದ ಅಧ್ಯಕ್ಷೆ ಉಷಾ ಹಾಗೂ ಅಂಗನವಾಡಿ ಶಿಕ್ಷಕಿ ಲಕ್ಷ್ಮಿ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಬಿರಾರಾರ್ಥಿಗಳ ಪರವಾಗಿ ಕು ಭಾರತಿ ಸ್ವಾಗತಿಸಿದರು,ಕು ಸನ್ನಿಧಿ ನಿರೂಪಿಸಿದರು.ಕು ಪೂಜಾ ವಂದಿಸಿದರು.

 
 
 
 
 
 
 
 
 
 
 

Leave a Reply