ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ಸ್ಥಿತಿ ಚಿಂತಾಜನಕ

ಮಂಗಳೂರು:  ರಾಷ್ಟ್ರೀಯ ಕಾಂಗ್ರೆಸ್‍ನ ಹಿರಿಯ ಪ್ರಭಾವಿ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಗ್ಯವನ್ನು ಪರಿಶೀಲಿಸುತ್ತಿರುವ ಹಿರಿಯ ವೈದ್ಯರಾದ ಡಾ.ಎ. ರಾಜ ಅವರು, ಆಸ್ಕರ್ ಅವರಿಗೆ ಐಸಿಯುನಲ್ಲೇ ಚಿಕಿತ್ಸೆ ನಡೆಯುತ್ತಿರುವುದರಿಂದ ಅವರ ಆರೋಗ್ಯ ಚೇತರಿಕೆಯ ಪರಿಸ್ಥಿತಿ ನೋಡಿಕೊಂಡು 2 ದಿನಗಳ ಬಳಿಕ ಶಸ್ತ್ರ ಚಿಕಿತ್ಸೆ ಮಾಡಲಾಗುವುದು ಎಂದು ಆಸ್ಕರ್ ಫೆರ್ನಾಂಡಿಸ್ ಅವರ ಕುಟುಂಬದವರ ಬಳಿ ತಿಳಿಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಈ ನಡುವೆ ಕಾಂಗ್ರೆಸ್‍ನ ಹಿರಿಯ ನಾಯಕರಾದ ಎಚ್.ಕೆ. ಪಾಟೀಲ್, ಎಂ.ಬಿ ಪಾಟೀಲ್ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುತ್ತಿರುವ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸುತ್ತಿದ್ದಾರೆ.  ಹಿರಿಯ ಮುಖಂಡ ಜನಾರ್ಧನ ಪೂಜಾರಿ ಅವರು ತಮ್ಮ ಸ್ನೇಹಿತನ ಆರೋಗ್ಯ ಸ್ಥಿತಿ ನೋಡಿ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.

ಆಸ್ಕರ್ ಫೆರ್ನಾಂಡಿಸ್‌ರವರು ಶೀಘ್ರ ಗುಣಮುಖವಾಗುವಂತೆ ಪ್ರಾರ್ಥಿಸಲು ಮನವಿ:
ರಾಜ್ಯಸಭಾ ಸದಸ್ಯರಾದ ಓಸ್ಕರ್ ಫೆರ್ನಾಂಡಿಸ್‌ರವರು ಅಸ್ವಸ್ಥರಾಗಿ ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಕರ್‌ರವರ ಆರೋಗ್ಯ ಸುಧಾರಿಸಿ ಶೀಘ್ರ ಗುಣಮುಖ ಹೊಂದಲು ಉಡುಪಿ ಜಿಲ್ಲೆಯ ಎಲ್ಲಾ ಕಾರ್ಯಕರ್ತರು ಅವರವರ ಧಾರ್ಮಿಕ ಕೇಂದ್ರಗಳಲ್ಲಿ ಪ್ರಾರ್ಥಿಸಬೇಕೆಂಬುವುದು ಜಿಲ್ಲಾ ಕಾಂಗ್ರೆಸ್‌ನ ಇಚ್ಚೆಯಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರು ಕಾರ್ಯಕರ್ತರಲ್ಲಿ ವಿನಂತಿಸಿ ಮಾಡಿದ್ದಾರೆ.  

 
 
 
 
 
 
 
 
 
 
 

Leave a Reply