ಕರ್ಣಾಟಕ ಬ್ಯಾಂಕ್‌ನ ಮಾಜಿ ಆಡಳಿತ ನಿರ್ದೇಶಕ ಜಯರಾಮ ಭಟ್ ನಿಧನ

ಕರ್ಣಾಟಕ ಬ್ಯಾಂಕ್‌ನ ಮಾಜಿ ಆಡಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದ ಪಿ.ಜಯರಾಮ ಭಟ್ (71ವ.) ನಿಧನರಾಗಿದ್ದಾರೆ. 2009ರ ಕರ್ನಾಟಕ ಬ್ಯಾಂಕ್ ನಲ್ಲಿ ಅಧಿಕಾರ ವಹಿಸಿಕೊಂಡಿದ್ದು ಮೂರು ಅವಧಿಗೆ ಬ್ಯಾಂಕ್ ನಾಯಕತ್ವ ವಹಿಸಿದ್ದರು.

ಇವರ ಆವಧಿಯಲ್ಲಿ ಇ-ಲಾಬಿ, ಮೊಬೈಲ್ ಬ್ಯಾಂಕಿಂಗ್, ಪಿಒಎಸ್, ಆನ್‌ಲೈನ್ ಟ್ರೇಡಿಂಗ್ ಅಕೌಂಟ್, ಟ್ರಾವೆಲ್ ಕಾರ್ಡ್, ಗಿಫ್ಟ್ ಕಾರ್ಡ್ ಮುಂತಾದ ಯಶಸ್ವಿ ಯೋಜನೆಗಳನ್ನು ಪರಿಚಯಿಸಿ ಗ್ರಾಹಕರಿಂದ ಭಾರೀ ಮೆಚ್ಚುಗೆ ಗಳಿಸಿದ್ದು ಮಾತ್ರವಲ್ಲದೇ ಅವರ ಆಡಳಿತ ಅವಧಿಯಲ್ಲಿ ಕರ್ಣಾಟಕ ಬ್ಯಾಂಕ್ ಸರ್ವಾಂಗೀಣ ಪ್ರಗತಿ ಕಂಡಿತ್ತು.

ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು​ ಶ್ರೀ ಪೇಜಾವರ ಮಠ​, ಕಸಾಪ ಉಡುಪಿ ಜಿಲ್ಲೆ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ​ರು ಮುರಳಿ ಕಡೆಕಾರ್ ಮುಂತಾದವರು ತೀವ್ರ ವಿಷಾದ​ ವ್ಯಕ್ತ ಪಡಿಸಿದ್ದಾರೆ.  ​ 

 
 
 
 
 
 
 
 
 
 
 

Leave a Reply