ಪಡುಬೆಳ್ಳೆ ವೃತ್ತ ಮಟ್ಟದ ಪ್ರತಿಭಾ ಕಾರಂಜಿ

 ದಿನಾಂಕ: 07/09/2022 ರಂದುಪಡುಬೆಳ್ಳೆ ವೃತ್ತ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಜರುಗಿತು.

ಸಂಸ್ಥೆಯ ಆಡಳಿತ ಮಂಡಳಿಯ ಕಾರ್ಯದರ್ಶಿ ಶ್ರೀ ರತ್ನಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ತನ್ನ ಬಾಲ್ಯದ ದಿನಗಳ ಶಿಕ್ಷಣದ ಬಗ್ಗೆ ವಿವರಿಸಿ ವಿದ್ಯಾರ್ಥಿಗಳು ಇಂತಹ ಸ್ಪರ್ಧೆಯಲ್ಲಿ ಬಾಗವಹಿಸಿದಾಗ ಸಮಾಜದಲ್ಲಿ ಮುಂದೆ ಬರಲು ಸಾಧ್ಯ ಎಂಬುದಾಗಿ ಹೇಳಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಲಯನ್ವಿ.ಜಿ.ಶೆಟ್ಟಿ ಮಾತನಾಡಿ ತನ್ನಲ್ಲಿರುವ ಪ್ರತಿಭೆಯನ್ನು ಹೊರಹಾಕಲು ಇಂತಹ ಕಾರ್ಯಕ್ರಮಗಳು ಸಹಕಾರಿ ಎಂಬುದಾಗಿ ಹೇಳಿದರು.

ವೇದಿಕೆಯಲ್ಲಿ ಎಸ್.ವಿ.ಎಚ್.ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎ.ಪಿ.ಕೊಡಂಚ, ಎಸ್.ವಿ.ಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಷ್ಮಾ, ಎಸ್.ವಿ.ಎಸ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಮಮತಾ, ಎಸ್.ವಿ.ಎಚ್.ಕನ್ನಡ ಮಾಧ್ಯಮ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ನಟರಾಜ ಉಪಾಧ್ಯಯರು ಉಪಸ್ಥಿತರಿದ್ದರು. ಸುಮಾರು 275 ವಿದ್ಯಾರ್ಥಿಗಳು ಬಾಗವಹಿಸಿದ್ದರು. ಪಡುಬೆಳ್ಳೆ ವೃತ್ತದ ಸಿಆರ್‌ಪಿ ಶ್ರೀಮತಿ ಪರಿಮಳ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಂಸ್ಥೆಯ ಆಡಳಿತಾಧಿಕಾರಿ ಶ್ರೀ ಅನಂತ ಮೂಡಿತ್ತಾಯ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ನವೀನ್ ಶೆಟ್ಟಿ ಧನ್ಯವಾದವಿತ್ತರು. ಶ್ರೀಮತಿ ಅನಿತಾ ವೀರ ಮಥಾಯಸ್ ಹಾಗೂ ಶ್ರೀಮತಿ ಸೌಮ್ಯ ಕಾರ್ಯಕ್ರಮ ನಿರ್ವಹಿಸಿದರು.

ಕೊನೆಯಲ್ಲಿ ಸ್ಪರ್ಧಾ ವಿಜೇತರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

 
 
 
 
 
 
 
 
 
 
 

Leave a Reply