ಶ್ರೀ ಲಕ್ಷ್ಮೀ ಅನಂತ ಪದ್ಮನಾಭ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಶ್ರೀದೇವಿ ಭೂದೇವಿ ಸಹಿತ ಶ್ರೀನಿವಾಸ ದೇವರ ವೈಭವದ ಕಲ್ಯಾಣ ಮಹೋತ್ಸವ

ಉಡುಪಿಯ ಇತಿಹಾಸ ಪ್ರಸಿದ್ಧವಾದ ಶ್ರೀಪಣಿಯಾಡಿಯ ಶ್ರೀ ಲಕ್ಷ್ಮೀ ಅನಂತ ಪದ್ಮನಾಭ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಶ್ರೀ ಪುತ್ತಿಗೆ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥಶ್ರೀಪಾದರ ಸಂಕಲ್ಪದಂತೆ ದಿನಾಂಕ 04.05.2022 ಬುಧವಾರದಂದು ಸಂಜೆ 6 ಕ್ಕೆ ಗೋಧೂಳಿಯ ಶುಭ ಮುಹೂರ್ತದಲ್ಲಿ ಶ್ರೀದೇವಿ ಭೂದೇವಿ ಸಹಿತ ಶ್ರೀನಿವಾಸ ದೇವರ ವೈಭವದ ಕಲ್ಯಾಣ ಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಬೆಂಗಳೂರಿನ ಡಾ.ವಾದಿರಾಜ್ ಇವರ ನೇತೃತ್ವದ ಶ್ರೀನಿವಾಸ ಉತ್ಸವ ಬಳಗದವರು ಈ ಕಲ್ಯಾಣ ಮಹೋತ್ಸವವನ್ನು ನಡೆಸಿಕೊಡುತ್ತಾರೆ. ನಿರ್ವಹಣೆಯನ್ನು ಡಾ.ಬಿ.ಗೋಪಾಲಾಚಾರ್ಯರು, ಹಾಗೂ ಹಿನ್ನೆಲೆ ಗಾಯಕರಾಗಿ ಪ್ರಸಿದ್ಧ ಸಂಗೀತ ವಿದ್ವಾಂಸರಾದ ರಾಯಚೂರು ಶೇಷಗಿರಿದಾಸರು ಮತ್ತು ಶ್ರೀಮತಿ ಹರಿಚಂದನಾ ತಿರುಪತಿ ಇವರು ಭಾಗವಹಿಸುತ್ತಿದ್ದಾರೆ. ಅತ್ಯಂತ ಅಪೂರ್ವವಾದ ಈ ಕಾರ್ಯಕ್ರಮದಲ್ಲಿ ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀನಿವಾಸನ ಪರಮಾನುಗ್ರಹಕ್ಕೆ ಪಾತ್ರರಾಗಬೇಕಾಗಿ ವಿನಂತಿ. ಆಡಳಿತ ಮಂಡಳಿ. ಪಣಿಯಾಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನ. ಉಡುಪಿ.

 
 
 
 
 
 
 
 
 
 
 

Leave a Reply