ಪಾರಂಪಳ್ಳಿ- ಸುಮಂತ್ ಮೊಗವೀರ ಮನೆಗೆ ಶಾಸಕ ಹಾಲಾಡಿ ಭೇಟಿ

ಕೋಟ: ಇತ್ತೀಚಿಗೆ ಸಾಲಿಗ್ರಾಮದ ಪಾರಂಪಳ್ಳಿ ಪಡುಕರೆಯಲ್ಲಿ ಸಾಂಪ್ರದಾಯಿಕ ದೋಣಿ ಮೀನುಗಾರಿಕೆಯಲ್ಲಿ ತೊಡಗಿಕೊಂಡಿರುವಾಗ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ದುರ್ಮರಣಕ್ಕಿಡಾದ ಸಾಲಿಗ್ರಾಮ ಪಾರಂಪಳ್ಳಿ ಪಡುಕರೆ ಸುಮಂತ್ ಮೊಗವೀರ ಅವರ ಮನೆಗೆ ಕುಂದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರಲ್ಲದೆ ಮೀನುಗಾರಿಕಾ ಸಚಿವರ ಮೂಲಕ ಸಂಪರ್ಕಿಸಿ ಗರಿಷ್ಟ ಮಟ್ಟದ ಆರ್ಥಿಕ ಸಹಾಯ ಒದಗಿಸುವುದಾಗಿ ಭರವಸೆ ನೀಡಿದರು.

 
 
 
 
 
 
 
 
 
 
 

Leave a Reply