ಪರಿಸರ ರಕ್ಷಿಸಿ-ಜೀವನ ಉಳಿಸಿ ಅಭಿಯಾನ

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಸರಕಾರೇತರ ಸಂಸ್ಥೆ ಮುಂಬೈ, ವನದುರ್ಗ ರೈತಶಕ್ತಿ ಗುಂಪು ಮತ್ತು ಹಳಗೇರಿ ಪರಿಸರ ಹಿತರಕ್ಷಣಾ ವೇದಿಕೆ ಸಹಯೋಗದಲ್ಲಿ ಪರಿಸರ ರಕ್ಷಿಸಿ-ಜೀವನ ಉಳಿಸಿ ಅಭಿಯಾನ ಮತ್ತು ಪ್ರತಿಭಟನೆ ಬೈಂದೂರಿನ ಕಂಬದಕೋಣೆಯ ಮಹಾಲಸ ಕಲ್ಚರಲ್ ಹಾಲ್‍ನಲ್ಲಿ ಗುರುವಾರ ನಡೆಯಿತು.

ಪ್ರತಿಭಟನೆ ಉದ್ಘಾಟಿಸಿ ಮಾತನಾಡಿದ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಅಧ್ಯಕ್ಷ ತೋನ್ಸೆ ಜಯಶ್ರೀಕೃಷ್ಣ ಶೆಟ್ಟಿ ಮಾತನಾಡಿ ಕೈಗಾರಿಕಾ ಚಟುವಟಿಕೆಗಾಗಿ ಕಾಡು ಪ್ರದೇಶವನ್ನು ನಾಶ ಮಾಡುವುದರಿಂದ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತದೆ. ಜನರ ಜೀವನದ ಮೇಲೆ ನೇರ ಪರಿಣಾಮ ಬೀರುತ್ತದೆ. ಇದರ ಬದಲು ಬರಡು ಭೂಮಿಯನ್ನು ಅಥವಾ ಸೂಕ್ತ ವ್ಯವಸ್ಥೆಯಿರುವ ಪ್ರದೇಶವನ್ನು ಕೈಗಾರಿಕೆಗೆ ಬಳಸಿಕೊಳ್ಳಲು ಯೋಜನೆ ರೂಪಿಸಬೇಕು ಎಂದರು.

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಉಪಾಧ್ಯಕ್ಷ ನಿತ್ಯಾನಂದ ಡಿ.ಕೋಟ್ಯಾನ್ ಮಾತನಾಡಿ, ಸುಮಾರು 2 ದಶಕಗಳಿಂದ ಹೋರಾಟ ನಡೆಸಿಕೊಂಡು ಬರುತ್ತಿದ್ದು ಕರಾವಳಿ ಜಿಲ್ಲೆಗಳಲ್ಲಿನ ಪ್ರಮುಖ ಸಮಸ್ಯೆಗಳನ್ನು ತಾರ್ಕಿಕ ಅಂತ್ಯ ಕಾಣಿಸಲು ಯಶ್ವಸಿಯಾಗಿದ್ದೇವೆ. ಕೈಗಾರಿಕೆ ನಮ್ಮ ವಿರೋಧ ಇಲ್ಲ. ಅರಣ್ಯ ಹಾಗೂ ರೈತರಿಗೆ ಸಮಸ್ಯೆ ಆಗುವುದನ್ನು ಮನಗಂಡು ಈ ಪ್ರದೇಶವನ್ನು ಬಿಟ್ಟು ಬದಲಿ ಜಾಗ ಗುರುತಿಸಿ ಕೈಗಾರಿಕೆ ಪ್ರಾರಂಭಿಸಬೇಕು ಎಂದು ಆಗ್ರಹಿಸಿದರು.

ಕಂಬದಕೋಣೆ ಗ್ರಾ.ಪಂ.ಅಧ್ಯಕ್ಷ ಸುಕೇಶ ಶೆಟ್ಟಿ, ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಉಪಾಧ್ಯಕ್ಷ ರಾಮಚಂದ್ರ ಬೈಕಂಪಾಡಿ, ಪ್ರಧಾನ ಕಾರ್ಯದರ್ಶಿ ಸುರೇಂದ್ರ ಸಾಲಿಯಾನ್, ಹಳಗೇರಿ ಪರಿಸರ ಹಿತರಕ್ಷಣಾ ವೇದಿಕೆ ಪ್ರಮುಖ ಹೋರಾಟಗಾರ ನಳೀನ್ ಕುಮಾರ್ ಶೆಟ್ಟಿ, ಅಖಿಲ ಭಾರತ ತುಳು ಒಕ್ಕೂಟ ಅಧ್ಯಕ್ಷ ಧರ್ಮಪಾಲ್ ಯು.ದೇವಾಡಿಗ, ಉಡುಪಿ ಕ.ರಾ.ವೈ.ಸಂ.ಜಿಲ್ಲಾಧ್ಯಕ್ಷ ಡಾ.ಸುಬ್ರಹ್ಮಣ್ಯ ಭಟ್, ಮುಂಬಯಿ ದೇವಾಡಿಗ ಸಂಘದ ಅಧ್ಯಕ್ಷ ರವಿ ದೇವಾಡಿಗ. 

ಮುಂಬೈ ದೇವಾಡಿಗ ಸಂಘದ ಮಾಜಿ ಅಧ್ಯಕ್ಷ ಹಿರಿಯಡ್ಕ ಮೋಹನದಾಸ್, ಎಲ್.ವಿ.ಅಮೀನ್, ,ಕಿರಿಮಂಜೇಶ್ವರ ಗ್ರಾ.ಪಂ.ಮಾಜಿ ಅಧ್ಯಕ್ಷ ಸುಬ್ಬಣ್ಣ ಶೆಟ್ಟಿ, ಸದಸ್ಯ ಈಶ್ವರ ದೇವಾಡಿಗ, ಕೊಲ್ಲೂರು ಮೂಕಾಂಬಿಕ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯ ನರಸಿಂಹ ಹಳಗೇರಿ, ನಿವೃತ್ತ ಬ್ಯಾಂಕ್ ಮಾನ್ಯೇಜರ್ ಉದಯ ಕುಮಾರ್ ಶೆಟ್ಟಿ ಅರಣ್ಯ ಪ್ರದೇಶದಲ್ಲಿ ಕೈಗಾರಿಕಾ ವಲಯ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದರು. ವನದುರ್ಗ ರೈತಶಕ್ತಿ ಗುಂಪು ಸಂಯೋಜಕ ಪ್ರಭಾಕರ ಶೆಟ್ಟಿ ಸ್ವಾಗತಿಸಿದರು. ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಸಾಲಿಯಾನ್ ವಂದಿಸಿದರು.
 
 
 
 
 
 
 
 
 
 
 

Leave a Reply