ಪಡುಕೆರೆ ಬೀಚ್ ನಲ್ಲಿ ಸ್ವಚ್ಛ ಭಾರತ ಅಭಿಯಾನ – ಶಾಸಕ ರಘುಪತಿ ಭಟ್ ಭಾಗಿ

ಉಡುಪಿ : ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ವತಿಯಿಂದ ನೇಶನ್ ಫಸ್ಟ್ ತಂಡದ ಸಹಭಾಗಿತ್ವದಲ್ಲಿ ಇಂದು ಪಡುಕೆರೆ ಬೀಚ್ ನಲ್ಲಿ ಹಮ್ಮಿಕೊಳ್ಳಲಾದ “ಸ್ವಚ್ಛ ಭಾರತ ಅಭಿಯಾನ” ಕಾರ್ಯಕ್ರಮದಲ್ಲಿ ಶಾಸಕ ಕೆ. ರಘುಪತಿ ಭಟ್ ಭಾಗವಹಿಸಿ ಅಭಿಯಾನದಲ್ಲಿ ತೊಡಗಿಸಿಕೊಂಡವರಿಗೆ ಅಭಿನಂದನೆ ಸಲ್ಲಿಸಿದರು.

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಪ್ರವೀಣ್ ಶೆಟ್ಟಿ ಕಪ್ಪೆಟ್ಟು ಹಾಗೂ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ, ಉಡುಪಿ ನಗರ ಸಭೆಯ ಪೌರಾಯುಕ್ತರಾದ ಉದಯ್ ಶೆಟ್ಟಿ, ನೇಶನ್ ಫಸ್ಟ್ ತಂಡದ ಸೂರಜ್ ಕಿದಿಯೂರು ಮತ್ತು ನೇಶನ್ ಫಸ್ಟ್ ತಂಡದ ಸದಸ್ಯರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply