ಮಂಗಳೂರು: ಎಸ್ಡಿಪಿಐ ಮತ್ತು ನಿಷೇಧಿತ ಪಿಎಫ್ಐ ಸಂಘಟನೆಯ ಮುಖಂಡರು, ಕಾರ್ಯಕರ್ತರ ಮನೆ ಮೇಲೆ ಪೊಲೀಸ್ ದಾಳಿ ನಡೆದಿದೆ. ಈ ಹಿಂದೆ ನಡೆದ ದಾಳಿಯ ಮುಂದುವರಿದ ಭಾಗವಾಗಿ ಮಂಗಳೂರಿನ ಪಣಂಬೂರು, ಸುರತ್ಕಲ್, ಉಳ್ಳಾಲ, ಮಂಗಳೂರು ಗ್ರಾಮಾಂತರ ಸೇರಿ ಎಂಟು ಕಡೆ ದಾಳಿ ನಡೆಸಲಾಗಿದೆ. ಆಯಾ ಠಾಣಾ ವ್ಯಾಪ್ತಿಯ ಪೊಲೀಸರು ನೇತೃತ್ವದಲ್ಲಿ ದಾಳಿ ನಡೆದಿದೆ.
ಈಗಾಗಲೇ ಬಂಧನಕ್ಕೆ ಒಳಗಾದ ಮಂಗಳೂರಿನ ಪ್ರಮುಖ ಮೂವರು ಪಿಎಫ್ಐ ಮುಖಂಡರನ್ನು ರಾಷ್ಟ್ರೀಯ ತನಿಖಾ ದಳ ಎನ್ಐಎ ವಿಚಾರಣೆ ನಡೆಸುತ್ತಿದೆ.