ಬಂದೂಕು ಸ್ವಚ್ಛಗೊಳಿಸುತ್ತಿರುವಾಗ ನಡೆದ ದುರ್ಘಟನೆ ~ ಪೊಲೀಸ್ ಕಾನ್ ಸ್ಟೇಬಲ್ ಮೃತ

ದಾವಣಗೆರೆ: ಆಕಸ್ಮಿಕವಾಗಿ ಪಿಸ್ತೂಲ್ ನಿಂದ ಹಾರಿದ ಗುಂಡು ಕುತ್ತಿಗೆಗೆ ತಗುಲಿ ಪೊಲೀಸ್ ಕಾನ್ ಸ್ಟೇಬಲ್ ಮೃತಪಟ್ಟ ದಾರುಣ ಘಟನೆ ನಗರದಲ್ಲಿ ನಡೆದಿದೆ.

ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚೇತನ್ ಮೃತಪಟ್ಟ ದುರ್ದೈವಿ ಎಂದು ಗುರುತಿಸ ಲಾಗಿದೆ. ಚೇತನ್ ಬೆಳಿಗ್ಗೆ 11 ಗಂಟೆಗೆ ಆಗಮಿಸಿದ ವೇಳೆ ಪಿಸ್ತೂಲ್ ನಿಂದ ಹಾರಿದ ಗುಂಡು ಕುತ್ತಿಗೆಗೆ ತಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಬಳಿಕ ಹತ್ತಿರದಲ್ಲಿಯೇ ಇರುವ ಸಿಟಿ ಸೆಂಟ್ರಲ್ ಆಸ್ಪತ್ರೆಗೆ ಕೂಡಲೇ ಕರೆದುಕೊಂಡು ಬಂದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಭೇಟಿ ನೀಡಿದರು. ಇನ್ನು ಘಟನಾ ಸ್ಥಳಕ್ಕೆ ಐಜಿಪಿ ರವಿ ಭೇಟಿ ಪರಿಶೀಲನೆ ನಡೆಸಿದ್ದು, ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದು, ಇಲಾಖೆ ತನಿಖೆ ನಡೆಸುವಂತೆ ಸೂಚಿಸಿದ್ದಾರೆ. ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಪಿಸ್ತೂಲ್ ಟ್ರಿಗರ್ ಒತ್ತಿದ ಪರಿಣಾಮ ಈ ಘಟನೆ ನಡೆಯಿತೋ, ಆಕಸ್ಮಿಕವಾಗಿ ಸಂಭವಿಸುತೋ ಎಂಬುದು ಸ್ಪಷ್ಟವಾಗಿಲ್ಲ. ಚೇತನ್ ಅಕಾಲಿಕ ಮರಣಕ್ಕೆ ಪೊಲೀಸ್ ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ.

 
 
 
 
 
 
 
 
 
 
 

Leave a Reply