ಕೃಷ್ಣ ನಗರಿ ರಕ್ಷಣೆಗೆ ಬಂದ ಆರಕ್ಷಕರಿಗೆ ಮುಖ್ಯಮಂತ್ರಿ ಚಿನ್ನದ ಪದಕ 

ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ-ಸಿಬ್ಬಂದಿಯನ್ನು 2017 ಮತ್ತು 2018ನೇ ಸಾಲಿನ ಮುಖ್ಯಮಂತ್ರಿಗಳ ಪದಕಕ್ಕಾಗಿ ಆಯ್ಕೆ ಮಾಡಲಾಗಿದೆ. ಉಡುಪಿ ಜಿಲ್ಲೆಯ ಎಸ್ಪಿ ಸಹಿತ ಒಟ್ಟು ಆರು ಮಂದಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿ ಪದಕಕ್ಕೆ ಆಯೆಯಾಗಿದ್ದಾರೆ.

ಉಡುಪಿ ಜಿಲ್ಲೆಯ ಎಸ್ಪಿ ವಿಷ್ಣುವರ್ಧನ್ ಎನ್., ಉಡುಪಿ ಡಿವೈಎಸ್ಪಿ ಟಿ.ಆರ್. ಜೈಶಂಕರ್, ಉಡುಪಿ ಕರಾವಳಿ ಕಾವಲು ಪೊಲೀಸ್‌ನ ಪೊಲೀಸ್ ನಿರೀಕ್ಷಕ ರವೀಶ್ ಎಸ್. ನಾಯಕ್ ಅವರಿಗೆ 2017ನೇ ಸಾಲಿನ ಮುಖ್ಯಮಂತ್ರಿ ಪದಕ ಘೋಷಣೆಯಾಗಿದೆ.​​

ಕುಂದಾಪುರ ವೃತ್ತ ನಿರೀಕ್ಷಕ ಕೆ.ಆರ್. ಗೋಪಿಕೃಷ್ಣ, ಉಡುಪಿ ವೃತ್ತ ನಿರೀಕ್ಷಕ ಮಂಜುನಾಥ್, ಜಿಲ್ಲಾ ಸಶಸ ಮೀಸಲು ಪಡೆಯ ಸಿಬ್ಬಂದಿ ಸಂತೋಷ್ ಜೆ. ಅವರನ್ನು 2018ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ ಮಾಡಲಾಗಿದೆ.

ಮುಖ್ಯಮಂತ್ರಿ ಪದಕ ಪ್ರದಾನ ಸಮಾರಂಭವು ನ. 20ರಂದು ಬೆಳಗ್ಗೆ 10ಗಂಟೆಗೆ ಬೆಂಗಳೂರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯಲಿದೆ
 
 
 
 
 
 
 
 
 
 
 

Leave a Reply