ಆಂಧ್ರಪ್ರದೇಶದ ಮುಖ್ಯಮಂತ್ರಿ ಪೋಸ್ಟರ್ ಹರಿದ ನಾಯಿ ವಿರುದ್ಧ ದೂರು ದಾಖಲು!

ವಿಜಯವಾಡ: ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಪೋಸ್ಟರ್ ಹರಿದ ನಾಯಿಯ ವಿರುದ್ಧ ತೆಲುಗು ದೇಶಂ ಪಕ್ಷದ(ಟಿಡಿಪಿ) ನಾಯಕಿಯೊಬ್ಬರು ದೂರು ದಾಖಲಿಸಿದ ವಿಚಿತ್ರ ಘಟನೆ ವಿಜಯವಾಡದಲ್ಲಿ ನಡೆದಿದೆ.

ನಾಯಿಯ ವಿರುದ್ಧ ಪಾಯಕರಾವ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಟಿಡಿಪಿ ನಾಯಕಿ ದಾಸರಿ ಉದಯ ಶ್ರೀ, ಮಹಾನ್ ವ್ಯಕ್ತಿಯನ್ನು ಅವಮಾನಿಸಿರುವ ನಾಯಿ ರಾಜ್ಯದ ಆರು ಕೋಟಿ ಜನರಿಗೆ ನೋವುಂಟು ಮಾಡಿದೆ. ಕೃತ್ಯದ ಹಿಂದಿರುವ ನಿಜವಾದ ಆರೋಪಿಗಳನ್ನು ಬಂಧಿಸಿ ಶಿಕ್ಷಿಸಬೇಕು ಎಂದು ಆಗ್ರಹಿಸಿದ್ದಾರೆ.

ಜಗನ್ ಮೋಹನ್ ರೆಡ್ಡಿ ಅವರನ್ನು ಅಪಹಾಸ್ಯ ಮಾಡಲು ಟಿಡಿಪಿ ನಾಯಕಿ ಈ ದೂರು ನೀಡಿದ್ದಾರೆ ಎಂದು ವೈಎಸ್ಆರ್ ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ. ನಾಯಿಯೊಂದು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಪೋಸ್ಟರ್ ಹರಿಯುತ್ತಿರುವ ವಿಡಿಯೋ ಇತ್ತೀಚೆಗೆ ವೈರಲ್ ಆಗಿತ್ತು.

 
 
 
 
 
 
 
 
 
 
 

Leave a Reply