ಉಡುಪಿ: ದೇಶವಿಡೀ ಕೊರೊನಾ ಸಂಕಷ್ಟದಿಂದ ಬದುಕಿನ ಅಸ್ತಿತ್ವಕ್ಕಾಗಿ ಪರದಾಡುತ್ತಿರುವ ಇಂತಹ ಸನ್ನಿವೇಶದಲ್ಲಿ ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವುದು ಸರಿಯಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು ಹೇಳಿದ್ದಾರೆ.
ವಿಶ್ವ ಮಾರಕಟ್ಟೆಯಲ್ಲಿ ಕಚ್ಛಾ ತೈಲ ಬೆಲೆ ಮತ್ತು ಭಾರತದ ರೂಪಾಯಿ ಎದುರು ಡಾಲರ್ ಮೌಲ್ಯ ಯಥಾಸ್ಥಿತಿಯಲ್ಲಿದ್ದರೂ ಡೀಸೆಲ್ ಮತ್ತು ಪೆಟ್ರೋಲ್ ಬೆಲೆಯನ್ನು ಅನುಕ್ರಮವಾಗಿ ಲೀ.ಗೆ ಸುಮಾರು 28 ಪೈಸೆ ಹಾಗೂ 32 ಪೈಸೆ ಏರಿಸಿರುವ ಸರಕಾರದ ಕ್ರಮ ನಿಷ್ಕರುಣೆಯಿಂದ ಕೂಡಿದೆ ಎಂದು ಅಶೋಕ್ ಕೊಡವೂರು ತಿಳಿಸಿದ್ದಾರೆ