ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ

ಪರಮ ಗುರು ಶ್ರೀ ವಿಶ್ವೇಶತೀರ್ಥ ಶ್ರೀಪಾದರ ವೃಂದಾವನ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದ ಕೆ ರಘುಪತಿ ಭಟ್ : ತಮ್ಮ ಯಾವತ್ತೂ ಏಳಿಗೆಯ ಹಿತಚಿಂತಕರಾಗಿದ್ದ ಮಹಾತಪಸ್ವಿ ಶ್ರೀ ಪೇಜಾವರ ಮಠಾಧೀಶ ಕೀರ್ತಿಶೇಷ ಶ್ರೀ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರ ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿರುವ ಮೂಲವೃಂದಾವನ ದರ್ಶನ ಪಡೆದ ಕೆ ರಘುಪತಿ ಭಟ್ಟರು ಫಲಪುಷ್ಪ ಗುರುಕಾಣಿಕೆ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದರು ‌.

ವಿದ್ಯಾಪೀಠದ ಪ್ರಾಚಾರ್ಯ ವಿದ್ವಾನ್ ಸತ್ಯನಾರಾಯಣ ಆಚಾರ್ಯರು ಭಟ್ಟರು ಮತ್ತೊಮ್ಮೆ ಉಡುಪಿಯ ಶಾಸಕರಾಗಿ ಆಯ್ಕೆ ಯಾಗಿ ಉಡುಪಿ ಕೃಷ್ಣನ ಜನತೆಯ ಸೇವೆ ಸಲ್ಲಿಸಲು ಅವಕಾಶ ದೊರೆಯುವಂತೆ ಗುರುಗಳ ಅನುಗ್ರಹವನ್ನು ಪ್ರಾರ್ಥಿಸಿ ಪ್ರಸಾದ ನೀಡಿದರು . ವ್ಯವಸ್ಥಾಪಕ ಶೇಷಾದ್ರಿ ಭಟ್ , ಅರ್ಚಕ ನಾಗರಾಜ ಭಟ್ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply