ಉಡುಪಿ ಜಿಲ್ಲಾ ಬಿಜೆಪಿಯಿಂದ ಚುನಾವಣಾ ಪ್ರಣಾಳಿಕೆ ಬಿಡುಗಡೆ

ವಿಧಾನಸಭಾ ಚುನಾವಣೆಯ ಪ್ರಯುಕ್ತ ಬಿಜೆಪಿ ಉಡುಪಿ ಜಿಲ್ಲಾ ಚುನಾವಣಾ ಪ್ರಣಾಳಿಕೆಯನ್ನು ಕರ್ನಾಟಕ ಸರಕಾರದ ಮಾನ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಯವರು ಬಿಜೆಪಿ ಉಡುಪಿ ಜಿಲ್ಲಾ ಮಾಧ್ಯಮ ಕೇಂದ್ರದಲ್ಲಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ, ಮಾಜಿ ವಿಧಾನ ಪರಿಷತ್ ಸದಸ್ಯೆ ಹಾಗೂ ಖ್ಯಾತ ಚಲನಚಿತ್ರ ನಟಿ ತಾರಾ, ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಚುನಾವಣಾ ನಿರ್ವಹಣಾ ಸಮಿತಿಯ ಜಿಲ್ಲಾ ಸಂಚಾಲಕ ಮನೋಹರ್ ಎಸ್. ಕಲ್ಮಾಡಿ, ಪ್ರಣಾಳಿಕೆ ಸಮಿತಿಯ ಜಿಲ್ಲಾ ಸಂಚಾಲಕ ಅಂಡಾರು ದೇವಿಪ್ರಸಾದ್ ಶೆಟ್ಟಿ, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಪ್ರಣಾಳಿಕೆ ಸಮಿತಿಯ ಸದಸ್ಯರಾದ ರತ್ನಾಕರ ಇಂದ್ರಾಳಿ, ಸುಮಿತ್ರಾ ಆರ್. ನಾಯಕ್, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply