ಮೇ 25: ಉಡುಪಿ ಜಿಲ್ಲೆಯ ನೂತನ ಶಾಸಕರಿಗೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದನೆ: ಕುಯಿಲಾಡಿ

ಮೇ 10ರಂದು ನಡೆದ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮಗದೊಮ್ಮೆ ಭರ್ಜರಿ ವಿಜಯ ದಾಖಲಿಸಿರುವುದು ಉಡುಪಿ ಜಿಲ್ಲಾ ಬಿಜೆಪಿಗೆ ಹೆಮ್ಮೆ ತಂದಿದೆ.

ಈ ಪ್ರಯುಕ್ತ ಮೇ 25, ಗುರುವಾರ ಸಂಜೆ ಗಂಟೆ 5.30ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯ ಬಳಿ ನಿರ್ಮಿಸಿರುವ ವೇದಿಕೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಐದು ನೂತನ ಶಾಸಕರುಗಳಾದ ಯಶ್ಪಾಲ್ ಎ. ಸುವರ್ಣ ಉಡುಪಿ, ಗುರ್ಮೆ ಸುರೇಶ್ ಶೆಟ್ಟಿ ಕಾಪು, ವಿ.ಸುನೀಲ್ ಕುಮಾರ್ ಕಾರ್ಕಳ, ಕಿರಣ್ ಕುಮಾರ್ ಕೊಡ್ಗಿ ಕುಂದಾಪುರ ಮತ್ತು ಗುರುರಾಜ್ ಶೆಟ್ಟಿ ಗಂಟಿಹೊಳಿ ಬೈಂದೂರು ಇವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದಿಸುವ ಜೊತೆಗೆ ಸಮಸ್ತ ಕಾರ್ಯಕರ್ತ ಬಂಧುಗಳು ಹಾಗೂ ಮತದಾರ ಬಾಂಧವರಿಗೆ ಕೃತಜ್ಞತೆ ಸಲ್ಲಿಸುವ ‘ಅಭಿನಂದನಾ ಸಮಾರಂಭ’ ನಡೆಯಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು, ವಿವಿಧ ಸ್ತರದ ಪದಾಧಿಕಾರಿಗಳು, ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳ ಕಾರ್ಯಕರ್ತ ಬಂಧುಗಳು, ಜನಪ್ರತಿನಿಧಿಗಳು ಮತ್ತು ಪಕ್ಷದ ಹಿತೈಷಿಗಳು ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply