ಉಡುಪಿಯ ನೂತನ ಶಾಸಕ ಬಿಜೆಪಿ ಒಬಿಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣರವರಿಗೆ ಜಿಲ್ಲಾ ಒಬಿಸಿ ಮೋರ್ಚಾ ವತಿಯಿಂದ ಸನ್ಮಾನ

ಪಕ್ಷದ ಸಾಮಾನ್ಯ ಕಾರ್ಯಕರ್ತರಾಗಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ, ಪ್ರಸಕ್ತ ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುವ ಜೊತೆಗೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಹೆಚ್ಚಿನ ಅಂತರದ ಮತಗಳಿಂದ ಗೆಲುವು ಸಾಧಿಸಿರುವ ಯಶ್ಪಾಲ್ ಎ. ಸುವರ್ಣರವರನ್ನು ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಜಿಲ್ಲಾ ಕಛೇರಿಯಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಪಣಿಯೂರು, ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಕುಲಾಲ್ ಕಡಿಯಾಳಿ, ಅರುಣ್ ಕುಮಾರ್ ಬಾಣ, ಜಿಲ್ಲಾ ಉಪಾಧ್ಯಕ್ಷರಾದ ಗಣೇಶ್ ಕುಮಾರ್ ಸಂಪಿಗೆನಗರ, ಲೀಲಾ ಆರ್. ಅಮೀನ್, ಮನೋಜ್ ಕರ್ಕೇರಾ, ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷೆ ಸುಮಿತ್ರಾ ಅರ್. ನಾಯಕ್, ಒಬಿಸಿ ಮೋರ್ಚಾ ಜಿಲ್ಲಾ ಕಾರ್ಯದರ್ಶಿಗಳಾದ ರಾಕೇಶ್ ಜೋಗಿ, ಜ್ಯೋತಿ ಹರೀಶ್, ಆನಂದ ಕುಲಾಲ್, ಕೋಶಾಧಿಕಾರಿ ಸತೀಶ್ ಪೂಜಾರಿ, ಕಾರ್ಯಕಾರಿಣಿ ಸದಸ್ಯರಾದ ಸಹನಾ ವಿಶ್ವನಾಥ್ ಸಂತೋಷ್ ಭಂಡಾರಿ, ಶ್ರೀಧರ ಅಮೀನ್, ಒಬಿಸಿ ಮೋರ್ಚಾ ಮಂಡಲ ಅಧ್ಯಕ್ಷರಾದ ಉಡುಪಿಯ ವಿನಯ್ ಕುಮಾರ್ ಕಲ್ಮಾಡಿ, ಕಾರ್ಕಳದ ರಮಾನಂದ ಪೂಜಾರಿ, ಕುಂದಾಪುರದ ಸತೀಶ್ ಭಾರಿಕೆರೆ ಹಾಗೂ ಪಕ್ಷದ ಪ್ರಮುಖರು, ಒಬಿಸಿ ಮೋರ್ಚಾ ಮಂಡಲಗಳ ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply