ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಯಾಗಿಸುವ ಸಂಕಲ್ಪದೊಂದಿಗೆ ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ ಕೋಟಿ ಗೀತಾ ಲೇಖನ ಅಭಿಯಾನ

ಪ್ರಧಾನಿ ಶ್ರೀ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸುವ ಸಂಕಲ್ಪದೊಂದಿಗೆ ಪರ್ಯಾಯ ಶ್ರೀ ಪುತ್ತಿಗೆ ಮಠದ ಪರಮ ಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರ ಅನುಗ್ರಹದಿಂದ ಕೋಟಿ ಗೀತಾ ಲೇಖನ ಅಭಿಯಾನದಲ್ಲಿ ಉಡುಪಿ ಜಿಲ್ಲಾ ಯುವಮೋರ್ಚಾ ಕಾರ್ಯಕರ್ತರು ಭಾಗಿಯಾಗುವ ಮೂಲಕ ಉಡುಪಿಯಿಂದ ನರೇಂದ್ರ ಮೋದಿಯವರ ಗೆಲುವಿಗೆ ಹೊಸ ಸಂದೇಶ ರವಾನೆ ಮಾಡಿದ್ದಾರೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು.

ಉಡುಪಿ ಶ್ರೀಕೃಷ್ಣ ಮಠದ ಗೀತಾ ಮಂದಿರದಲ್ಲಿ ಪೂಜ್ಯ ಸುಗುಣೇಂದ್ರ ತೀರ್ಥ ಶ್ರೀಪಾದರು ಕಾರ್ಯಕರ್ತರಿಗೆ ಕೋಟಿ ಗೀತಾ ಲೇಖನ ಪುಸ್ತಕವನ್ನು ಹಸ್ತಾಂತರಿಸಿ ಅಶೀರ್ವಚಿಸಿದ ಶ್ರೀಗಳು ಶ್ರೀ ಕೃಷ್ಣನಿಗೆ ಅತ್ಯಂತ ಪ್ರಿಯವಾಗಿರುವ ಗೀತಾ ಸಂದೇಶವನ್ನು ಸಾರುವ ಕಾರ್ಯ ಅತ್ಯಂತ ಶ್ರೇಷ್ಠವಾಗಿದ್ದು, ಕೋಟಿ ಗೀತಾ ಲೇಖನ ಅಭಿಯಾನದದಲ್ಲಿ ತಮ್ಮನ್ನು ತೊಡಗಿಸಿಕೊಂಡ ತಮ್ಮ ಸಂಕಲ್ಪ ಸಾಕರಗೊಳ್ಳುವ ಬಗ್ಗೆ ಯಾವುದೇ ಸಂದೇಹವಿಲ್ಲ ಎಂದರು.

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಯವರು ಶ್ರೀಪಾದರ ಆಶೀರ್ವಾದ ಪಡೆದು ಯುವಮೋರ್ಚಾ ಕಾರ್ಯಕರ್ತರ ಈ ಕಾರ್ಯ ಸರ್ವರಿಗೂ ಮಾದರಿಯಾಗಿ ನರೇಂದ್ರ ಮೋದಿಯವರ ಗೆಲುವಿನ ಸಂಕಲ್ಪ ಸಿದ್ಧಿಯಾಗಲಿ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಶ್ರೀ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಪಕ್ಷದ ಪ್ರಮುಖರಾದ ಶ್ರೀ ರಾಜೇಶ್ ಕಾವೇರಿ, ಯುವಮೋರ್ಚಾ ರಾಜ್ಯ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ, ಯುವಮೋರ್ಚಾದ ಜಿಲ್ಲಾ ಹಾಗೂ ಮಂಡಲದ ಪದಾಧಿಕಾರಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply