ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ನೇಮಕ

ಉಡುಪಿ ಜಿಲ್ಲೆಯಲ್ಲಿ ತೆರವಾಗಿರುವ ಮತ್ತು ಖಾಲಿ ಉಳಿದಿರುವ ಜಿಲ್ಲಾ ಬಿಜೆಪಿ ಪದಾಧಿಕಾರಿಗಳ ಸ್ಥಾನಗಳನ್ನು ಭರ್ತಿ ಮಾಡಿ ಸದಸ್ಯರನ್ನು ನೇಮಕ ಮಾಡಲಾಗಿದೆ.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿ ಗೀತಾಂಜಲಿ ಎಮ್. ಸುವರ್ಣ ಮತ್ತು ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಕಾರ್ಯದರ್ಶಿಗಳಾಗಿ ಗುರುಪ್ರಸಾದ್ ಶೆಟ್ಟಿ ಕಟಪಾಡಿ ಮತ್ತು ಅನಿತಾ ಶ್ರೀಧರ್ ಕುಂದಾಪುರ ಹಾಗೂ ಜಿಲ್ಲಾ ವಕ್ತಾರರಾಗಿ ಕೆ.ರಾಘವೇಂದ್ರ ಕಿಣಿ ಕಡಿಯಾಳಿ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply