ಬೆಂಗಳೂರು: ಹೈಕಮಾಂಡ್ ಸೂಚಿಸಿದ ತಕ್ಷಣವೇ ರಾಜೀನಾಮೆ ನೀಡುತ್ತೇನೆ ಎಂದು ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿ ಹೊಸ ಸಂಚಲನ ಸೃಷ್ಟಿಸಿದ್ದಾರೆ.
ಇಂದು ಬೆಳಿಗ್ಗೆ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಹೈಕಮಾಂಡ್ ಸೂಚಿಸಿದ ತಕ್ಷಣವೇ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದರು.
ದೆಹಲಿ ಹೈಕಮಾಂಡ್ಗೆ ಎಲ್ಲಿಯವರೆಗೂ ವಿಶ್ವಾಸವಿರುತ್ತೋ ಅಲ್ಲಿಯವರೆಗೆ ನಾನು ಮುಂದುವರಿಯುತ್ತೇನೆ.ಯಾವ ದಿವಸ ಬೇಡ ಯಡಿಯೂರಪ್ಪನವರೇ ಎಂದು ಹೇಳ್ತಾರೋ ಅಂದೇ ರಾಜೀನಾಮೆ ಕೊಟ್ಟು ರಾಜ್ಯದ ಅಭಿವೃದ್ಧಿಗಾಗಿ ಹಗಲು ರಾತ್ರಿ ದುಡಿಯುತ್ತೇನೆ.ನನಗೆ ಅವಕಾಶ ಕೊಟ್ಟ ಜನರಿಗಾಗಿ ಕೆಲಸ ಮಾಡುತ್ತೇನೆ ಎಂದರು.