ಗಾಳಿ ಸುದ್ದಿಗೆ ಕಿವಿಗೊಡಬೇಡಿ.. ನಾನೇ ಸಿಎಂ ಆಗಿ ಮುಂದುವರಿವೆ~ ಯಡಿಯೂರಪ್ಪ

ಪ್ರಧಾನಿ ಜೊತೆ ರಾಜೀನಾಮೆಗೆ ಸಂಬಂಧ ಪಟ್ಟ ವಿಷಯ ಮಾತುಕತೆ ನಡೆದಿಲ್ಲ ಎಂದ ಬಿಎಸ್ ವೈ

ಹೊಸದಿಲ್ಲಿ: ನನ್ನ ರಾಜೀನಾಮೆ ಕೇವಲ ಗಾಳಿ ಸುದ್ದಿ, ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಕರ್ನಾಟಕದ ಭವನದಲ್ಲಿ ಹೇಳಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿಗೂ ಮೊದಲು ಮಾಧ್ಯಮಗಳ ಜೊತೆ ಮುಖ್ಯಮಂತ್ರಿ ಯಡಿಯೂರಪ್ಪ ಮಾತನಾಡಿ, ಪ್ರಧಾನಿಯನ್ನು ಭೇಟಿಯಾಗಿದ್ದು,  ರಾಜೀನಾಮೆಗೆ ಸಂಬಂಧಿಸಿದ ಮಾತುಕತೆಗಳು ನಡೆದಿಲ್ಲ.

ನಾನು ರಾಜೀನಾಮೆ ನೀಡಿಲ್ಲ. ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಿದ್ದೇನೆ. ನಾನು ರಾಜೀನಾಮೆ ನೀಡುವ ಪ್ರಶ್ನೆ ಇಲ್ಲವೇ ಇಲ್ಲ ಎಂದು ಹೇಳುವ ಮೂಲಕ ರಾಜೀನಾಮೆ ಸುದ್ದಿಗಳಿಗೆ ತೆರೆ ಎಳೆದರು. ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ ಅವರನ್ನು ಕೂಡ ಯಡಿಯೂರಪ್ಪ ಭೇಟಿಯಾಗಲಿದ್ದಾರೆ.
 ಮೇಕೆದಾಟು ಯೋಜನೆಗೆ ಅನುಮತಿ, ಬೆಂಗಳೂರಿನಲ್ಲಿ ಅಮೆರಿಕ ರಾಯಭಾರಿ ಕಚೇರಿ ಸ್ಥಾಪನೆ, ಪೆರಿಫೆರಲ್ ರಿಂಗ್ ರೋಡ್ಗೆ ಕಾಮಗಾರಿಗೆ ಅನುದಾನ ನೀಡುವಂತೆ ಮನವಿ ಸಲ್ಲಿಸಿದ್ದು, ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ ಎಂದು ಶುಕ್ರವಾರ ಮೋದಿಯನ್ನು ಭೇಟಿಯಾಗಿರುವ ಯಡಿಯೂರಪ್ಪ ಹೇಳಿದ್ದರು.
ನಾಯಕತ್ವ ಬದಲಾವಣೆ ವಿಚಾರ, ಸಂಪುಟ ಪುನಾರಚನೆ ವದಂತಿಗಳ ಮಧ್ಯೆ, ಮುಖ್ಯಮಂತ್ರಿ ಯಡಿಯೂರಪ್ಪ ದಿಲ್ಲಿ ಪ್ರವಾಸದಲ್ಲಿದ್ದಾರೆ. ಪುತ್ರರಾದ ವಿಜಯೇಂದ್ರ, ರಾಘವೇಂದ್ರ ಹಾಗೂ ಲೆಹರ್ ಸಿಂಗ್ ಸೇರಿದಂತೆ 7 ಮಂದಿ ಜೊತೆಗಿದ್ದಾರೆ. ಮುಂದಿನ ವಾರ ದಿಲ್ಲಿಗೆ ವಲಸಿಗ ಸಚಿವರು ಭೇಟಿ ನೀಡುತ್ತಿದ್ದಾರೆ. ಸಂಪುಟದಿಂದ ಕೈಬಿಡದಂತೆ ವರಿಷ್ಠರ ಮೇಲೆ ಒತ್ತಡ ಹೇರಲಿದ್ದಾರೆ.
 
 
 
 
 
 
 
 
 

Leave a Reply