ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಉಡುಪಿಯ 35 ನಗರಸಭಾ ವಾರ್ಡ್ ಮತ್ತು 4 ಪಂಚಾಯತ್ಗಳಿಗೆ ಉಸ್ತುವಾರಿಗಳಾಗಿ ನೇಮಿಸಿದ ವೀಕ್ಷಕರಿಗೆ ಆದೇಶ ಪತ್ರವನ್ನು ನೀಡಲಾಯಿತು.
ರಮೇಶ್ ಕಾಂಚನ್ ಅವರು 35 ನಗರಸಭಾ ವಾರ್ಡ್ ಮತ್ತು 4 ಪಂಚಾಯತ್ಗಳಿಗೆ ಉಸ್ತುವಾರಿಗಳಾಗಿ ನೇಮಕಗೊಂಡ ವೀಕ್ಷಕರನ್ನು ಉದ್ದೇಶಿಸಿ ಮಾತನಾಡುತ್ತಾ ತಮಗೆ ನೀಡಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ತಮಗೆ ನೀಡಿದ ವಾರ್ಡ್/ಪಂಚಾಯತ್ನ ಬೂತ್ಗಳಲ್ಲಿ ಸಭೆಗಳನ್ನು ನಡೆಸಲು ತಾವು ನಿರ್ಧರಿಸಿ ಉತ್ತಮ ಸಂಘಟನೆಯನ್ನು ಮಾಡುತ್ತಾ ಪಕ್ಷವನ್ನು ಅಧಿಕಾರಕ್ಕೆ ತರಲು ಶಕ್ತಿ ಮೀರಿ ಪ್ರಯತ್ನಿಸಬೇಕೆಂದು ಕರೆ ನೀಡಿದರು.
ಈ ಸಭೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾದ ಪ್ರಸಾದ್ರಾಜ್ ಕಾಂಚನ್, ನಾಯಕರಾದ ಕುಶಲ್ ಶೆಟ್ಟಿ, ಪ್ರಖ್ಯಾತ್ ಶೆಟ್ಟಿ, ಅಮೃತ್ ಶೆಣೈ, ಮಮತಾ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.