ತೈಲ ಬೆಲೆ ಏರಿಕೆ ವಿರುದ್ಧ ಉಡುಪಿಯಲ್ಲಿ ಕಾಂಗ್ರೆಸ್ ನಿಂದ ಪ್ರತಿಭಟನೆ

ಉಡುಪಿ: ಪೆಟ್ರೋಲ್ ,ಡೀಸೆಲ್ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ನಿಂದ ಉಡುಪಿಯಲ್ಲಿ ಪ್ರತಿಭಟನೆ ನಡೆಯಿತು. ಸರ್ವಿಸ್ ಬಸ್ ನಿಲ್ದಾಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಭಾಗಿಯಾದರು. ಕೊರೋನಾ ಲಾಕ್ ಡೌನ್ ಸಂದರ್ಭದಲ್ಲೂ ಕೇಂದ್ರ ,ರಾಜ್ಯ ಸರಕಾರಗಳು ಜನ ವಿರೋಧಿ ನೀತಿ ಅನುಸರಿಸುತ್ತಿವೆ. 
ಸತತ ಬೆಲೆ ಏರಿಸುವ ಮೂಲಕ ಜನರ ಬದುಕಿನ ಮೇರೆ ಬರೆ ಎಳೆಯುತ್ತಿವೆ. ಯುಪಿಎ ಸರಕಾರ ಇದ್ದಾಗ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕರು, ಈಗ ಇಂಧನ ,ದಿನ ಬಳಕೆ ವಸ್ತುಗಳ ನಿರಂತರ ಬೆಲೆ ಏರಿಕೆಯಾಗುತ್ತಿದ್ದರೂ ಮೌನಕ್ಕೆ ಶರಣಾಗಿದ್ದಾರೆ ಎಂದು ಕೇಂದ್ರ, ರಾಜ್ಯ ಸರಕಾರಗಳ ವಿರುದ್ಧ ಕಾಂಗ್ರೆಸ್ ಮುಖಂಡರು ವಾಗ್ದಾಳಿ ನಡೆಸಿದರು.
ಮಾಜಿ ಸಚಿವ ವಿನಯಕುಮಾರ್ ಸೊರಕೆ, ನಾಯಕರಾದ ಅಶೋಕ್ ಕೊಡವೂರು, ಪ್ರಖ್ಯಾತ್ ಶೆಟ್ಟಿ, ವೆರೋನಿಕಾ ಕರ್ನೇಲಿಯೋ , ಗೀತಾ ವಾಗ್ಳೆ ಸಹಿತ ಜಿಲ್ಲಾ ಮುಖಂಡರು ಭಾಗಿಯಾಗಿದ್ದರು 

 
 
 
 
 
 
 
 
 
 
 

Leave a Reply