ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಮಾರ್ಚ್ 10ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಯೋಜನೆ 

ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ  ಮಾರ್ಚ್ 10ರಂದು ಪೂರ್ವಾಹ್ನ 10ಗಂಟೆಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉಡುಪಿಯ ಕಾಂಗ್ರೆಸ್ ಭವನ ದಲ್ಲಿ ನಡೆಸಲಾಗುವುದು.
 
ಈ ಸಂದರ್ಭದಲ್ಲಿ ಜಿಲ್ಲೆಯ ಹತ್ತು ಬ್ಲಾಕ್ ಗಳಿಂದ ಆಯ್ಕೆ ಮಾಡಿರುವ ವಿವಿಧ ಕುಲ ಕಸುಬು ಮಾಡುತ್ತಿರುವ ಹತ್ತು ಮಹಿಳೆಯರನ್ನು ಗೌರವಿಸಲಾಗುವುದು ಹಾಗೂ ಜಿಲ್ಲೆಯಲ್ಲೇ ವಿಶಿಷ್ಟ ಸಾಧನೆ ಮಾಡಿರುವ ಕಾರ್ಕಳದ ವಿಜೇತ ವಿಶೇಷ ಚೇತನ ಮಕ್ಕಳ ಶಾಲೆಯ ಸಂಚಾಲಕಿ ಡಾ.ಕಾಂತಿ ಹರೀಶ್ ಅವರಿಗೆ ಇಂದಿರಾ ಪ್ರಿಯದರ್ಶಿನಿ ಪ್ರಶಸ್ತಿಯನ್ನು ಗಣ್ಯರ ಸಮ್ಮುಖದಲ್ಲಿ ನೀಡಿ ಗೌರವಿಸಲಾಗುವುದು
 
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಯ ಕುರಿತು ಸಮಾಜಸೇವಾ ಕಾರ್ಯಕರ್ತೆ ಆತ್ರಾಡಿ ಅಮೃತಾ ಶೆಟ್ಟಿ ಅವರಿಂದ ವಿಶೇಷ ಉಪನ್ಯಾಸವೂ ಜರುಗಲಿದೆ.​ ​ಈ ಕಾರ್ಯಕ್ರಮದಲ್ಲಿ ಪಕ್ಷದ ಪ್ರಮುಖ ನಾಯಕರಾದ ವಿನಯ ಕುಮಾರ್ ಸೊರಕೆ,​ ​ಜಿಲ್ಲಾಧ್ಯಕ್ಷ  ಅಶೋಕ್ ಕುಮಾರ್ ಕೊಡವೂರು, ಪ್ರಮೋದ್ ಮಧ್ವರಾಜ್,  ಗೋಪಾಲ ಪೂಜಾರಿ, ಇನ್ನಿತರ ಪ್ರಮುಖ ನಾಯಕರೂ, ವಿವಿಧ ಘಟಕಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ ಎಂದು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಗೀತಾ ವಾಗ್ಳೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು , ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ​​ ಹಾಜರಿದ್ದು ಈ ಕಾರ್ಯಕ್ರಮವನ್ನು ​ಯಶಸ್ವಿ ಗೊಳಿಸಬೇಕೆಂದು ಅವರು ವಿನಂತಿಸಿದ್ದಾರೆ.​​
 
 
 
 
 
 
 
 
 
 
 

Leave a Reply