ಬ್ರಹ್ಮಾವರ ತಲುಪಿದ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜನಧ್ವನಿ ಪಾದಯಾತ್ರೆ

ಉಡುಪಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಆಡಳಿತ ವೈಖರಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿರುವ ಜನಧ್ವನಿ ಪಾದಯಾತ್ರೆ ಬ್ರಹ್ಮಾವರ ತಲುಪಿತು.

ಮೂರನೇ ದಿನದ ಪಾದಯಾತ್ರೆ ಬುಧವಾರ ಬೆಳಿಗ್ಗೆ ಉದ್ಯಾವರ ಬಲಾಪಾದೆ ಬಳಿಯಿಂದ ಆರಂಭಗೊಂಡಿತು.ಅಪರಾಹ್ನ ಕಲ್ಯಾಣಪುರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ ಪ್ರಮುಖ ಭಾಷಣ ಮಾಡಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ನೇತೃತ್ವದಲ್ಲಿ ನಡೆದ ಪಾದಯಾತ್ರೆಯಲ್ಲಿ ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ ಮತ್ತು ಪ್ರಮೋದ್ ಮಧ್ವರಾಜ್, ಪಕ್ಷ ಪ್ರಮುಖರಾದ ಕಳ್ಳಿಗೆ ತಾರನಾಥ ಶೆಟ್ಟಿ, ಎಂ. ಎ. ಗಫೂರ್, ದಿನೇಶ್ ಪುತ್ರನ್, ಕುಶಲ ಶೆಟ್ಟಿ, ಭಾಸ್ಕರ ರಾವ್ ಕಿದಿಯೂರು, ನಾಗೇಶ್ ಕುಮಾರ್ ಉದ್ಯಾವರ, ಅಣ್ಣಯ್ಯ ಸೇರಿಗಾರ್, ಬಿ. ನರಸಿಂಹಮೂರ್ತಿ, ಸತೀಶ್ ಅಮೀನ್ ಪಡುಕರೆ, ಜನಾರ್ದನ್ ಭಂಡಾರ್ಕಾರ್, ರಮೇಶ್ ಕಾಂಚನ್, ಹರೀಶ್ ಕಿಣಿ, ಕಿಶನ್ ಹೆಗ್ಡೆ ಕೊಳ್ಕೆಬೈಲು, ವೆರೋನಿಕಾ ಕರ್ನೇಲಿಯೊ, ಗೀತಾ ವಾಗ್ಳೆ, ಡಾ. ಸುನೀತ ಶೆಟ್ಟಿ, ಯತೀಶ್ ಕರ್ಕೇರ, ಪ್ರಖ್ಯಾತ ಶೆಟ್ಟಿ, ಸೌರಭ್ ಬಲ್ಲಾಳ್, ದೀಪಕ್ ಕೋಟ್ಯಾನ್, ರೋಶನಿ ಒಲಿವೆರಾ, ಕೀರ್ತಿ ಶೆಟ್ಟಿ, ಹರೀಶ್ ಶೆಟ್ಟಿ ಪಂಗಾಳ, ಶಬ್ಬೀರ್ ಅಹ್ಮದ್, ಇಸ್ಮಾಯಿಲ್ ಆತ್ರಾಡಿ, ಮುರಲಿ ಶೆಟ್ಟಿ ಇಂದ್ರಾಳಿ, ಕೃಷ್ಣಮೂರ್ತಿ ಆಚಾರ್ಯ, ದಿನಕರ ಹೇರೂರು ಮೊದಲಾದವರು ಭಾಗವಹಿಸಿದ್ದರು

 
 
 
 
 
 
 
 
 
 
 

Leave a Reply